ಸುದ್ದಿ

ಮೈಸೂರಿನ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ ಯೋಗ ಕ್ರೀಡೆಗೆ ಉತ್ತೇಜನ
ಮೈಸೂರಿನ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ ಯೋಗ ಕ್ರೀಡೆಗೆ ಉತ್ತೇಜನ
ಮೈಸೂರು ಮಣಿಪಾಲ್ ಆಸ್ಪತ್ರೆಯಲ್ಲಿ ‘ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್’ ಆರಂಭ
ಮೈಸೂರು ಮಣಿಪಾಲ್ ಆಸ್ಪತ್ರೆಯಲ್ಲಿ ‘ಮಣಿಪಾಲ್ ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟ್ರೋ ಸೈನ್ಸಸ್’ ಆರಂಭ
ಕುಸ್ತಿ ಕಲೆಯಿಂದ ಸೇವಾ ದಾರಿಯತ್ತ – ಪೈಲ್ವಾನ್ ಭಾಸ್ಕರ್ ದಾಸ್
ಕುಸ್ತಿ ಕಲೆಯಿಂದ ಸೇವಾ ದಾರಿಯತ್ತ – ಪೈಲ್ವಾನ್ ಭಾಸ್ಕರ್ ದಾಸ್
ಗುರು ವೈಭವೋತ್ಸವ ಫೆ.19 ರಿಂದ
ಗುರು ವೈಭವೋತ್ಸವ ಫೆ.19 ರಿಂದ
ಫೆ. 6 ರಿಂದ 8ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ “ಮೈಸೂರು ಸಂತೇ–2026”
ಫೆ. 6 ರಿಂದ 8ರವರೆಗೆ ಮಹಾರಾಜ ಕಾಲೇಜು ಮೈದಾನದಲ್ಲಿ “ಮೈಸೂರು ಸಂತೇ–2026”
ಕುಸುಮ್-ಸಿ: ಮಂಡ್ಯ ಜಿಲ್ಲೆಯ ಮೊದಲ ಕಾಮಗಾರಿಗೆ ಚಾಲನೆ
ಕುಸುಮ್-ಸಿ: ಮಂಡ್ಯ ಜಿಲ್ಲೆಯ ಮೊದಲ ಕಾಮಗಾರಿಗೆ ಚಾಲನೆ
Bharat Connect ಮೂಲಕ ಸರಳೀಕೃತ EV ವಾಲೆಟ್ ರೀಚಾರ್ಜ್ ಮೂಲಕ NBBL ಮೊಬಿಲಿಟಿ ಕ್ಷೇತ್ರಕ್ಕೆ ಶಕ್ತಿ ನೀಡುತ್ತಿದೆ
Bharat Connect ಮೂಲಕ ಸರಳೀಕೃತ EV ವಾಲೆಟ್ ರೀಚಾರ್ಜ್ ಮೂಲಕ NBBL ಮೊಬಿಲಿಟಿ ಕ್ಷೇತ್ರಕ್ಕೆ ಶಕ್ತಿ ನೀಡುತ್ತಿದೆ
ರಾಜ್ಯ ಬಾಕ್ಸಿಂಗ್ ಚಾಂಪಿಯನ್‌ಶಿಪ್–2026: ಮೈಸೂರು ವಿಶ್ವವಿದ್ಯಾಲಯದ ಬಾಕ್ಸರ್‌ಗಳಿಗೆ 16 ಪದಕ
ರಾಜ್ಯ ಬಾಕ್ಸಿಂಗ್ ಚಾಂಪಿಯನ್‌ಶಿಪ್–2026: ಮೈಸೂರು ವಿಶ್ವವಿದ್ಯಾಲಯದ ಬಾಕ್ಸರ್‌ಗಳಿಗೆ 16 ಪದಕ
ಜನವರಿ 24 ರಂದು ಮೈಸೂರಿನಲ್ಲಿ ಕೃಷ್ಣ ಬಲರಾಮ ರಥಯಾತ್ರೆ
ಜನವರಿ 24 ರಂದು ಮೈಸೂರಿನಲ್ಲಿ ಕೃಷ್ಣ ಬಲರಾಮ ರಥಯಾತ್ರೆ
ಆರೋಗ್ಯದ ಸಮತೋಲನಕ್ಕೆ ಆಯುರ್ವೇದದ ಬಸ್ತಿ ಚಿಕಿತ್ಸೆ
ಆರೋಗ್ಯದ ಸಮತೋಲನಕ್ಕೆ ಆಯುರ್ವೇದದ ಬಸ್ತಿ ಚಿಕಿತ್ಸೆ
ಮೈಸೂರಿನಲ್ಲಿ ಆದಿಯೋಗಿ ರಥಯಾತ್ರೆ
ಮೈಸೂರಿನಲ್ಲಿ ಆದಿಯೋಗಿ ರಥಯಾತ್ರೆ
ಚೊಚ್ಛಲ ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿ ಮಹಿಳಾ ತಂಡದ ನಾಯಕಿ ಮತ್ತು ತಂಡವನ್ನು ಘೋಷಿಸಿದ ಮೈಸೂರು ವಾರಿಯರ್ಸ್
ಚೊಚ್ಛಲ ಮಹಾರಾಣಿ ಟ್ರೋಫಿ ಕೆಎಸ್‌ಸಿಎ ಟಿ20 2025 ಪಂದ್ಯಾವಳಿ ಮಹಿಳಾ ತಂಡದ ನಾಯಕಿ ಮತ್ತು ತಂಡವನ್ನು ಘೋಷಿಸಿದ ಮೈಸೂರು ವಾರಿಯರ್ಸ್
ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…
ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…
ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ
ನಾಲ್ವಡಿ ಪ್ರಶಸ್ತಿ: ಕನ್ನಡ ಹೋರಾಟಗಾರರ ಕಡೆಗಣನೆ; ಸಹಾಯ ನಿರ್ದೇಶಕರ ಅಮಾನತಿಗೆ ತೇಜಸ್ವಿ ಆಗ್ರಹ
ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು
ಸುಣ್ಣದಕೇರಿ 50 ನೇ ವಾರ್ಡ್‌ನಲ್ಲಿ ಪಾರಂಪರಿಕ ದೀಪಗಳು ಒಂದು ದಿನವೂ ಬೆಳಗಲಿಲ್ಲ…!ಮೈಸೂರು ಪಾಲಿಕೆಯ ನಿರರ್ಥಕ ಯೋಜನೆಗೆ ಒಂದು ಸಾಕ್ಷಿ: ಲಕ್ಷಾಂತರ ರುಪಾಯಿ ಪೋಲು

ಮೈಸೂರು

ಮೈಸೂರಿನ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ ಯೋಗ ಕ್ರೀಡೆಗೆ ಉತ್ತೇಜನ
ಮೈಸೂರಿನ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ ಯೋಗ ಕ್ರೀಡೆಗೆ ಉತ್ತೇಜನ
      

ವರದಿ :ಮಹೇಶ್ ನಾಯಕ್

ಮೈಸೂರು: ಮೈಸೂರು ನಗರ ಹಾಗೂ ಗ್ರಾಮಾಂತರ ಭಾಗಗಳಲ್ಲಿ ಅನೇಕ ಪ್ರತಿಭಾವಂತ ಯೋಗ ಕ್ರೀಡಾಪಟುಗಳು ಹೊರಹೊಮ್ಮುತ್ತಿದ್ದರೂ, ಅವರಿಗೆ ನಿರಂತರ ತರಬೇತಿ, ತಾಂತ್ರಿಕ ಮಾರ್ಗದರ್ಶನ ಹಾಗೂ ಸ್ಪರ್ಧಾತ್ಮಕ ಅವಕಾಶಗಳ ಕೊರತೆ ಕಂಡುಬರುತ್ತಿದೆ. ಈ ಹಿನ್ನೆಲೆ ಕ್ರೀಡಾ ಯುವ ಸಬಲೀಕರಣ ಮತ್ತು ಇಲಾಖೆ ವತಿಯಿಂದ ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿ ಆರಂಭಿಸಿ, ಅರ್ಹ ಯೋಗ ತರಬೇತುದಾರರನ್ನು ಇಲ್ಲದೆ ಆಸಕ್ತ ಯೋಗ ಪಟುಗಳು ಖಾಸಾಗಿವಲಯದಲ್ಲಿ ಕಲಿತುಕೊಂಡು ಯೋಗದಲ್ಲಿ ಸಾಧನೆ ಮಾಡುತ್ತಿದ್ದು. ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ಯೋಗಸಾನ ಸ್ಪರ್ಧೇಯಲ್ಲಿ ಭಾಗವಹಿಸಿ ಬಹುಮಾನ ಪಡೆದುಕೊಳ್ಳುತಿದ್ದು. ಗ್ರಾಮಾಂತರ ಹಾಗೂ ನಗರ ಭಾಗದಲ್ಲಿ ಇನ್ನೂ ಸಾಕಷ್ಟು ಯೋಗಪಟುಗಳು ತಯಾರುಗುತ್ತಿದ್ದು ಅವರಿಗೆ ಇನ್ನೂ ಹೆಚ್ಚಿನ ಸೂಕ್ತ ಮಾರ್ಗದರ್ಶನ ಅವಶ್ಯಕತೆ ಇರುವುದರಿಂದ ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡುವ ಚಲ ಹೊಂದಿರುವ ಯೋಗಪಟುಗಳು ಕರ್ನಾಟಕ ಸರ್ಕಾರ ಹಾಗೂ ಕ್ರೀಡಾ ಯುವಸಬಲೀಕರಣ ಸಹಯೋಗದಲ್ಲಿ ನುರಿತ ಹಾಗೂ ಪದವಿ ಪಡೆದ ಯೋಗ ಶಿಕ್ಷಕರನ್ನು ನೇಮಿಸಿಕೊಂಡಾಗ ಮಾತ್ರ ಗ್ರಾಮೀಣ, ಹಾಗೂ ನಗರದಲ್ಲಿ ಇನ್ನು ಹೆಚ್ಚು ಯೋಗ ಪಟುಗಳು ತಯಾರುಗುತ್ತಾರೆ.

ಆತಿಥೇಯ ಭಾರತ ಐತಿಹಾಸಿಕ ಸಾಧನೆ ಮಾಡಿ ಒಟ್ಟು ೧೧೪ ಪದಕಗಳನ್ನು ಗೆದ್ದು ಪದಕ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿದೆ.ಐದು ದಿನಗಳ ಕಾಲ ನಡೆದ ಈ ಅಂತರರಾಷ್ಟ್ರೀಯ ಸ್ಪರ್ಧೆಯಲ್ಲಿ ಭಾರತ ೧೦೨ ಚಿನ್ನದ ಪದಕಗಳನ್ನು ಸೇರಿ ಒಟ್ಟು ೧೧೪ ಪದಕಗಳನ್ನು ತನ್ನದಾಗಿಸಿಕೊಂಡು ಯೋಗಾಸನ ಕ್ರೀಡೆಯಲ್ಲಿ ಭಾರತ ಮೇಲುಗೈ ಸಾಧಿಸಿದೆ. ಈಗ ವಿಶ್ವ ಮಟ್ಟದಲ್ಲಿ ಯೋಗದಲ್ಲಿ ವಿಶ್ವ ಯೋಗಸಾಸನ ಚಾಂಪಿಯನ್‌ಶಿಪ್ ೨೦೨೬ ಅಗ್ರಸ್ಥಾನದಲ್ಲಿದೆ ಹಾಗೂ ಏಷ್ಯನ್ ಗೇಮ್ಸ್‌ನಂತಹ ಕ್ರೀಡಾಕೂಟಗಳಲ್ಲಿ ಯೋಗ ಕ್ರೀಡೆಯಲ್ಲಿ ಭಾರತವು ಅತ್ಯಧಿಕ ಪದಕಗಳನ್ನು ಗೆದ್ದು ಸಾಧನೆ ಮಾಡಿದೆ.ಇದರಿಂದ ವಿದ್ಯಾರ್ಥಿಗಳಿಗೆ ವೈಜ್ಞಾನಿಕ ಹಾಗೂ ವ್ಯವಸ್ಥಿತ ತರಬೇತಿ ದೊರೆಯುವ ಜೊತೆಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಸಾಧನೆ ಮಾಡಲು ಅವಕಾಶ ಸಿಗಲಿz. ಯೋಗವನ್ನು ಕೇವಲ ಆರೋಗ್ಯ ಚಟುವಟಿಕೆಯಾಗಿಯೇ ಅಲ್ಲದೆ ಕ್ರೀಡಾ ಕ್ಷೇತ್ರದಲ್ಲಿಯೂ ಮತ್ತಷ್ಟು ಬಲಪಡಿಸುವ ಅಗತ್ಯವಿದ್ದು, ಈ ಕ್ರಮದಿಂದ “ಯೋಗ ನಗರಿ ಮೈಸೂರು” ಎಂಬ ಹೆಗ್ಗಳಿಕೆಗೆ ಇನ್ನಷ್ಟು ಅರ್ಥಪೂರ್ಣತೆ ದೊರೆಯಲಿದೆ.

SportsYoga #Yogasana #Mysuru #YogaCompetition #Fitness

ಇತ್ತೀಚಿನ ದಿನಗಳಲ್ಲಿ ಮೈಸೂರಿನಲ್ಲಿ ಯೋಗ ಕ್ರೀಡಾಪಟುಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಯೋಗ ಕ್ರೀಡೆಯ ಬಗ್ಗೆ ಯುವಜನರಲ್ಲಿ ಆಸಕ್ತಿ ವೃದ್ಧಿಯಾಗುತ್ತಿದೆ. ಕ್ರೀಡಾ ವಸತಿ ನಿಲಯಗಳಲ್ಲಿ ಯೋಗ ತರಬೇತಿಯನ್ನು ಆರಂಭಿಸಿ ಸೂಕ್ತ ಮಾರ್ಗದರ್ಶನ ಹಾಗೂ ಸೌಲಭ್ಯಗಳನ್ನು ಒದಗಿಸಿದರೆ ರಾಷ್ಟ್ರ ಮಟ್ಟದ ಯೋಗ ಕ್ರೀಡಾಪಟುಗಳನ್ನು ರೂಪಿಸಲು ಸಾಧ್ಯವಾಗಲಿದೆ. ಯೋಗ ಪರಂಪರೆಯನ್ನು ಹೊಂದಿರುವ ಮೈಸೂರಿನಲ್ಲಿ ಈ ಯೋಜನೆ ಜಾರಿಗೊಂಡರೆ ರಾಜ್ಯದ ಯೋಗ ಪ್ರತಿಭೆಗಳಿಗೆ ಉತ್ತಮ ವೇದಿಕೆ ದೊರೆಯಲಿದೆ.”
ಮಂಜುನಾಥ್ ಬಿ.ಆರ್.


ಮೈಸೂರು ಜಿಲ್ಲೆಯ ಚಾಮುಂಡಿ ವಿಹಾರ ಕ್ರೀಡಾ ವಸತಿ ನಿಲಯದಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ವತಿಯಿಂದ ಯೋಗಾಸನ ತರಬೇತಿಯನ್ನು ಆರಂಭಿಸಿದರೆ, ಯೋಗಾಸನ ಕ್ರೀಡಾಪಟುಗಳಿಗೆ ವೈಜ್ಞಾನಿಕ ಹಾಗೂ ಪ್ರಚಲಿತ ಸ್ಪರ್ಧಾ ನಿಯಮಗಳ ಆಧಾರದ ಮೇಲೆ ಗುಣಮಟ್ಟದ ತರಬೇತಿ ನೀಡಲು ಸಾಧ್ಯವಾಗುತ್ತದೆ ಎಂದು ಕರ್ನಾಟಕದ ಮೊದಲ ಎನ್‌ಐಎಸ್ ಯೋಗ ತರಬೇತಿದಾರರಾದ ಕಿಶೋರ್ ಎಂ.ಆರ್. ತಿಳಿಸಿದ್ದಾರೆ.ಯೋಗಾಸನ ಕ್ರೀಡೆಯ ಬೆಳವಣಿಗೆಗೆ ತರಬೇತಿ ವ್ಯವಸ್ಥೆ ಅತ್ಯಂತ ಅಗತ್ಯವಾಗಿದ್ದು, ವ್ಯವಸ್ಥಿತ ತರಬೇತಿ ಮೂಲಕ ಹೆಚ್ಚು ಪ್ರತಿಭಾವಂತ ಯೋಗ ಪಟುಗಳನ್ನು ರೂಪಿಸಲು ಸಾಧ್ಯವಾಗಲಿದೆ. ಜೊತೆಗೆ ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಾತ್ಮಕ ಸಾಮರ್ಥ್ಯ ಹೊಂದಿದ ಕ್ರೀಡಾಪಟುಗಳನ್ನು ಬೆಳೆಸಲು ಈ ಕ್ರಮ ಸಹಕಾರಿಯಾಗಲಿದೆ ಎಂದು ಅವರು ಅಭಿಪ್ರಾಯಪಟ್ಟರು.

ಕಿಶೋರ್ ಎಂ.ಆರ್.
ಕರ್ನಾಟಕದ ಮೊದಲ ಎನ್‌ಐಎಸ್ ಯೋಗ ತರಬೇತಿದಾರರು
ಮೈಸೂರು ಜಿಲ್ಲೆ

ಬಿರ್ಲಾ-ನು ಏರೋಕಾನ್ ‘ದಿ ಎಲೆಮೆಂಟ್ಸ್ ಕಲೆಕ್ಷನ್’ಅನ್ನು ಅನಾವರಣಗೊಳಿಸಿದೆ: ಸಂರಚನಾ
ಬಿರ್ಲಾ-ನು ಏರೋಕಾನ್ ‘ದಿ ಎಲೆಮೆಂಟ್ಸ್ ಕಲೆಕ್ಷನ್’ಅನ್ನು ಅನಾವರಣಗೊಳಿಸಿದೆ: ಸಂರಚನಾ
ಆಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ‘ಮೈಸೂರು ಡೈರೆಕ್ಟರಿ’ ಆ್ಯಪ್ ಬಿಡುಗಡೆ
ಆಂಡ್ರಾಯ್ಡ್ ಮತ್ತು ಐಒಎಸ್‌ನಲ್ಲಿ ‘ಮೈಸೂರು ಡೈರೆಕ್ಟರಿ’ ಆ್ಯಪ್ ಬಿಡುಗಡೆ
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮೇ 10 ರಂದು
ರಾಜ್ಯ ಮಟ್ಟದ ಯೋಗಾಸನ ಸ್ಪರ್ಧೆ ಮೇ 10 ರಂದು

ರಾಜ್ಯ

ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…
ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ…

ಮೈಸೂರು : ಕಿಕ್ ಬಾಕ್ಸಿಂಗ್-ಬಾಕ್ಸಿಂಗ್ ನಲ್ಲಿ ಮಿಂಚುತ್ತಿರುವ ಸಿ.ಹೆಚ್.ಸ್ಪೂರ್ತಿಗೆ ವಿಶ್ವಚಾಂಪಿಯನ್ ಆಗುವ ಬಯಕೆ. ವಿದ್ಯಾರ್ಥಿ ದೆಸೆಯಲ್ಲಿಯೇ ಪಠ್ಯೇತರ ಚಟುವಟಿಕೆಗೆ ಒತ್ತು ನೀಡಿ ಕ್ರೀಡೆಯನ್ನು ಆಯ್ಕೆ ಮಾಡಿಕೊಂಡು ಅಥ್ಲೆಟಿಕ್ ನಲ್ಲಿ ಸಾಧನೆ ಮಾಡುತ್ತಾ ಇದಾದ ನಂತರ ಬಾಕ್ಸಿಂಗ್ ನತ್ತ ಗಮನಹರಿಸಿ ರಾಷ್ಟ್ರಮಟ್ಟದಲ್ಲಿ ಸಾಧನೆ ಮಾಡಿದ್ದಲ್ಲದೆ, ಅಂತರಾಷ್ಟ್ರೀಯ ಮಟ್ಟದಲ್ಲಿ ಮಿಂಚುವ ಸಲುವಾಗಿ ಕಠಿಣ ಪರಿಶ್ರಮ ಪಡುತ್ತಿರುವ ಭರವಸೆಯ ಕ್ರೀಡಾ ವಿದ್ಯಾರ್ಥಿನಿ ಮೈಸೂರಿನ ಮಹಾರಾಜ ಕಾಲೇಜಿನ ಸಿ.ಹೆಚ್.ಸ್ಪೂರ್ತಿ..ನಿಜಹೇಳಬೇಕೆಂದರೆ ಕ್ರೀಡೆ ಎನ್ನುವುದು ಒಂದು ದಿನದಲ್ಲಿ ಮುಗಿದು ಹೋಗುವುದಲ್ಲ. ಇದು ನಿರಂತರ ಪ್ರಕ್ರಿಯೆ… ಇದಕ್ಕಾಗಿ ಪ್ರತಿದಿನವೂ ಕಠಿಣ ತರಬೇತಿಯೊಂದಿಗೆ ಅಭ್ಯಾಸ ಮಾಡುತ್ತಲೇ ಇರಬೇಕಾಗುತ್ತದೆ. ಹೀಗಾಗಿ ಇದೊಂದು ತಪಸ್ಸು ಎಂದರೆ ತಪ್ಪಾಗಲಾರದು. ಕ್ರೀಡೆಯನ್ನು ಅದರಲ್ಲೂ ಅಥ್ಲೆಟಿಕ್ ನ್ನು ಆಯ್ಕೆ ಮಾಡಿಕೊಂಡು ಸಾಧನೆ ಮಾಡುವುದು ಸುಲಭದ ಕೆಲಸವಲ್ಲ. ಜತೆಗೆ ಅದರಲ್ಲಿ ಅವಕಾಶ ಗಿಟ್ಟಿಸಿಕೊಂಡು ಮುನ್ನಡೆಯುವುದು ಸವಾಲ್ ಆಗಿದೆ.

ಸಾಮಾನ್ಯವಾಗಿ ಬಾಲ್ಯದಲ್ಲಿ ವಿದ್ಯಾರ್ಥಿ, ವಿದ್ಯಾರ್ಥಿನಿಯರ ಕ್ರೀಡಾ ಬದುಕು ಓಟದಿಂದಲೇ ಆರಂಭವಾಗುತ್ತದೆ. ಆ ನಂತರ ಅದು ಮಗ್ಗಲು ಬದಲಿಸಿ ತಮಗೆ ಇಷ್ಟವಾಗಿದ್ದನ್ನು ಆಯ್ಕೆ ಮಾಡುವ ಹಂತಕ್ಕೆ ಹೋಗುತ್ತದೆ. ಆದರೆ ಪ್ರತಿಯೊಬ್ಬ ಕ್ರೀಡಾಪಟು ಓಟವನ್ನು ಬದಿಗಿಟ್ಟು ಮುನ್ನಡೆಯುವುದು ಕಷ್ಟ. ಓಡುತ್ತಲೇ ಕ್ರೀಡಾ ಬದುಕಿನ ಓಟವನ್ನು ಮುನ್ನಡೆಸುವುದು ಅನಿವಾರ್ಯವಾಗುತ್ತದೆ. ಇವತ್ತು ವಿದ್ಯಾರ್ಥಿನಿ ಸ್ಪೂರ್ತಿ ಅವರ ಕ್ರೀಡಾ ಬದುಕಿನ ಪುಟಗಳನ್ನು ತಿರುವಿ ಹಾಕಿದರೆ ಅವರು ಮಾಡಿರುವ ಸಾಧನೆ ಮತ್ತು ಮುಂದೆಯೂ ಸಾಧಿಸಿಬೇಕೆನ್ನುವ ಛಲ ಎದ್ದು ಕಾಣಿಸುತ್ತದೆ.

ಮೂಲತಃ ಹಾಸನ ಜಿಲ್ಲೆ ಚನ್ನರಾಯಪಟ್ಟಣದ ಚಿಕ್ಕೋನಹಳ್ಳಿ ಗ್ರಾಮದ ನಿವಾಸಿ ಹನುಮೇಗೌಡ, ಮತ್ತು ನಳಿನಾ ದಂಪತಿ ಪುತ್ರಿಯಾದ ಸ್ಪೂರ್ತಿ ಹಾಸನದ ಕುಂದೂರು ಮಠದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢಶಾಲಾ ಶಿಕ್ಷಣವನ್ನು ಮಾಡಿದ್ದು, ಈ ವೇಳೆಯಲ್ಲಿ ಕ್ರೀಡೆಯ ಬಗ್ಗೆ ಆಸಕ್ತಿ ಬಂದಿತ್ತು. ಶಾಲಾ ದಿನಗಳಲ್ಲಿ ಕಬಡ್ಡಿ, ಖೋ ಖೋ ಸೇರಿದಂತೆ ಹಲವು ಕ್ರೀಡೆಗಳಲ್ಲಿ ಭಾಗವಹಿಸಿದ್ದರೂ ಅಥ್ಲೆಟಿಕ್ ನತ್ತ ಹೆಚ್ಚಿನ ಒಲವನ್ನು ಹೊಂದಿದ್ದರು. ಈ ವೇಳೆ ಅಥ್ಲೆಟಿಕ್ ನ ೪೦೦ ಮತ್ತು ೨೦೦ ಮೀಟರ್ ನಲ್ಲಿ ಭಾಗವಹಿಸಿ ರಾಷ್ಟ್ರಮಟ್ಟದಲ್ಲಿ ಗಮನಸೆಳೆದದ್ದು ಇವರ ಕ್ರೀಡಾ ಸಾಧನೆಗೆ ಬರೆದ ಮುನ್ನುಡಿಯಾಗಿದೆ.

ಪ್ರೌಢಶಾಲಾ ಶಿಕ್ಷಣದ ನಂತರ ಪಿಯುಸಿಯನ್ನು ಹಾಸನ ಗೋಲ್ಡನ್ ಪಿಯು ಕಾಲೇಜಿನಲ್ಲಿ ಓದಿದ್ದು, ಆ ನಂತರ ಪದವಿ ಶಿಕ್ಷಣವನ್ನು ಪಡೆಯುವ ಸಲುವಾಗಿ ಮೈಸೂರಿನ ಮಹಾರಾಜ ಕಾಲೇಜಿಗೆ ಬಿಕಾಂಗೆ ನಂತರ ಟಿ.ಟಿ.ಎಲ್ ಕಾಲೇಜಿನಲ್ಲಿ ವಿದ್ಯಾಬ್ಯಾಸ ಮಾಡುತ್ತಿದ್ದಾರೆ. ಸೇರ್ಪಡೆಗೊಂಡರು. ಇಲ್ಲಿಂದ ಇವರ ಕ್ರೀಡಾ ಬದುಕಿನ ಮತ್ತೊಂದು ಮಜಲು ಆರಂಭವಾಯಿತು. ಜತೆಗೆ ಇವರಿಗೆ ತಾನು ಯಾವುದನ್ನು ಆಯ್ಕೆ ಮಾಡಿಕೊಳ್ಳಬೇಕು ಎಂದು ತೀರ್ಮಾನಿಸಲು ಸಾಧ್ಯವಾಯಿತು. ಮೊದಲಿನಿಂದಲೂ ಅಥ್ಲೆಟಿಕ್ ನಲ್ಲಿ ಸಾಧನೆ ಮಾಡಿಕೊಂಡು ಬಂದಿದ್ದರಿಂದ ಮೈಸೂರು ವಿಶ್ವವಿದ್ಯಾಲಯದ ಅಂತರ-ಕಾಲೇಜು ಚಾಂಪಿಯನ್‌ಶಿಪ್ ೨೦೨೩ರಲ್ಲಿ ಭಾಗವಹಿಸಿ ೪೦೦ ಮೀ ಮತ್ತು ೮೦೦ ಮೀ ಸ್ಪರ್ಧೆಗಳಲ್ಲಿ
ಅಥ್ಲೇಟಿಕ್ ತರಬೇತುದಾರರು ಪುನೀತ್ ಮಾರ್ಗದರ್ಶನದಲ್ಲಿ ಚಿನ್ನದ ಪದಕಗಳನ್ನು ಗೆಲ್ಲುವಲ್ಲಿ ಸಿ.ಹೆಚ್.ಸ್ಪೂರ್ತಿ ಯಶಸ್ವಿಯಾದರು

ಆದರೆ ಸುಮಾರು ೯ ವರ್ಷಗಳ ಕಾಲ ಅಥ್ಲೆಟಿಕ್ ನಲ್ಲಿದ್ದರೂ ರಾಷ್ಟ್ರಮಟ್ಟದಲ್ಲಿ ನಿರೀಕ್ಷೆ ಮಾಡಿದಷ್ಟು ಸಾಧನೆ ಮಾಡುವುದು ಸಾಧ್ಯವಾಗಲಿಲ್ಲ. ಹೀಗಾಗಿ ಇದರಲ್ಲಿ ಮುಂದುವರೆದರೆ ರಾಷ್ಟ್ರಮಟ್ಟದ ಕ್ರೀಡಾಪಟುವಾಗುವುದು ಕಷ್ಟ ಎನ್ನುವುದು ಅರಿವಿಗೆ ಬಂದಿತ್ತು. ಇದರಾಚೆಗೆ ಬೇರೆ ಏನಾದರೂ ಮಾಡಲೇ ಬೇಕೆಂಬ ತುಡಿತವೂ ಅವರಲ್ಲಿತ್ತು. ಅದೇ ವೇಳೆಗೆ ಬಾಕ್ಸಿಂಗ್ ಅವರನ್ನು ಸೆಳೆದಿತ್ತು. ಮುಂದಿನ ಕ್ರೀಡಾ ಜೀವನವನ್ನು ಮುಂದುವರೆಸುವುದಾದರೆ ಅದರ ಮೂಲಕವೇ ಎಂಬ ತೀರ್ಮಾನಕ್ಕೆ ಬಂದು ಬಿಟ್ಟರು.

ಅಥ್ಲೆಟಿಕ್ ನಿಂದ ಕಿಕ್ ಬಾಕ್ಸಿಂಗ್ ಮತ್ತು ಬಾಕ್ಸಿಂಗ್ ಕಡೆಗೆ ಹೆಚ್ಚಿನ ಗಮನಹರಿಸಿದ ಅವರು ಅದಕ್ಕೆ ಬೇಕಾದ ತರಬೇತಿಯನ್ನು ಪಡೆದುಕೊಂಡರು. ಜತೆಗೆ ಕಠಿಣ ಪರಿಶ್ರಮಪಟ್ಟರು. ಅವರ ಕಠಿಣ ಪರಿಶ್ರಮ ಮತ್ತು ಆತ್ಮವಿಶ್ವಾಸ ೨೦೨೩ರಲ್ಲಿ ನಡೆದ ಕರ್ನಾಟಕ ರಾಜ್ಯ ಮುವಾಯ್ ಥಾಯ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನದ ಪದಕವನ್ನು ತಂದುಕೊಟ್ಟಿತು. ಜತೆಗೆ ಬಾಕ್ಸಿಂಗ್ ನ ಸುಗಮ ಹಾದಿಗೆ ಬಾಗಿಲು ತೆರೆದು ಸ್ವಾಗತ ನೀಡಿತು.

ಕಿಕ್ ಬಾಕ್ಸಿಂಗ್ ಮತ್ತು ಬಾಕ್ಸಿಂಗ್ ಅವರ ಕ್ರೀಡಾ ಬದುಕಿಗೆ ಹೊಸದೊಂದು ಆಯಾಮ ನೀಡಿತು. ಈ ಕ್ಷೇತ್ರದಲ್ಲಿ ಕಷ್ಟಪಟ್ಟು ಸಾಧನೆ ಮಾಡಿದರೆ ರಾಜ್ಯ, ರಾಷ್ಟ್ರ ಮಾತ್ರವಲ್ಲದೆ, ಅಂತರ್ರಾಷ್ಟ್ರೀಯ ಮಟ್ಟದಲ್ಲಿಯೂ ಗಮನಸೆಳೆಯ ಬಹುದು ಎಂಬ ವಿಶ್ವಾಸ ಮೂಡಿತ್ತು. ಅಲ್ಲಿಂದ ಇಲ್ಲಿಯವರೆಗೆ ಕಠಿಣ ತರಬೇತಿ ಪಡೆಯುವುದರೊಂದಿಗೆ ನಿರಂತರ ಅಭ್ಯಾಸ ಮಾಡುತ್ತಿರುವ ಸ್ಪೂರ್ತಿ ಹಲವು ಪದಕಗಳನ್ನು ತನ್ನ ಮುಡಿಗೇರಿಸಿಕೊಂಡಿದ್ದಾರೆ. ಅದರಲ್ಲೂ ಹಲವು ಚಿನ್ನದ ಪದಕಗಳನ್ನು ಗೆಲ್ಲುವ ಮೂಲಕ ಹೆಣ್ಮಕ್ಕಳು ಮನಸ್ಸು ಮಾಡಿದರೆ ಏನನ್ನು ಬೇಕಾದರೂ ಸಾಧಿಸಬಹುದು ಎಂಬುದಕ್ಕೆ ನಿದರ್ಶನರಾಗಿದ್ದಾರೆ. ಕಿಕ್ ಬಾಕ್ಸಿಂಗ್ ಮತ್ತು ಬಾಕ್ಸಿಂಗ್ ನಲ್ಲಿ ಇವರ ಸಾಧನೆಗಳೇನು ಎಂಬುದನ್ನು ನೋಡಿದ್ದೇ ಆದರೆ ೨೦೨೩ ರಲ್ಲಿ ನಡೆದ ಕರ್ನಾಟಕ ರಾಜ್ಯ ಮಟ್ಟದ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನದ ಪದಕ, ೨೦೨೪ರಲ್ಲಿ ನಡೆದ ಸ್ವಾಮಿ ವಿವೇಕಾನಂದ ಸುಭಾರ್ತಿ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ-ವಿಶ್ವವಿದ್ಯಾಲಯ ಕಿಕ್‌ಬಾಕ್ಸಿಂಗ್ ಚಾಂಪಿಯನ್‌ಶಿಪ್ ಭಾಗವಹಿಸಿದರು. ನಲ್ಲಿ ಚಿನ್ನದ ಪದಕ, ೨೦೨೫ರಲ್ಲಿ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಕಿಕ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಕಂಚಿನ ಪದಕ, ೨೦೨೩ ರಲ್ಲಿ ಆಂಧ್ರ ಪ್ರದೇಶದ ಆಂಧ್ರ ವಿಶ್ವವಿದ್ಯಾಲಯದಲ್ಲಿ ನಡೆದ ಖೇಲೋ ಇಂಡಿಯಾ ಮಹಿಳಾ ಕಿಕ್ ಬಾಕ್ಸಿಂಗ್ ಲೀಗ್ ನಲ್ಲಿ ಚಿನ್ನದ ಪದಕ ಗೆಲ್ಲುವ ಮೂಲಕ ಚಿನ್ನದ ಹುಡುಗಿಯಾಗಿದ್ದಾರೆ.

ಇನ್ನು ಬಾಕ್ಸಿಂಗ್ ನಲ್ಲಿ ಇವರ ಸಾಧನೆ ಹೀಗಿದೆ.. ೨೦೨೩ರಲ್ಲಿ ನಡೆದ ದಸರಾ ಸಿಎಂ ಕಪ್ ನಲ್ಲಿ ಚಿನ್ನದ ಪದಕ, ತಮಿಳುನಾಡಿನಲ್ಲಿ ೨೦೨೪ರಲ್ಲಿ ನಡೆದ ಅಖಿಲ ಭಾರತ ಮುಕ್ತ ರಾಷ್ಟ್ರೀಯ ವಿಶುಯಲ್ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಚಿನ್ನದ ಪದಕ ಮತ್ತು ಅತ್ಯುತ್ತಮ ಬಾಕ್ಸರ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇಷ್ಟೇ ಅಲ್ಲದೆ, ಪಂಜಾಬ್‌ನ ಲವ್ಲಿ ಪ್ರೊಫೆಷನಲ್ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ-ವಿಶ್ವವಿದ್ಯಾಲಯ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನ ದಕ್ಷಿಣ ವಲಯದಲ್ಲಿ ೫ ನೇ ಸ್ಥಾನ ಪಡೆದಿದ್ದಾರೆ.

ಬೆಂಗಳೂರಿನಲ್ಲಿ ನಡೆದ ಎಲೈಟ್ ಮಹಿಳಾ ಹವ್ಯಾಸಿ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಬೆಳ್ಳಿ ಪದಕ, ೨೦೨೪ರಲ್ಲಿ ಪಂಜಾಬ್‌ನ ಗುರು ಕಾಶಿ ವಿಶ್ವವಿದ್ಯಾಲಯದಲ್ಲಿ ನಡೆದ ಅಖಿಲ ಭಾರತ ಅಂತರ-ವಿಶ್ವವಿದ್ಯಾಲಯ ಬಾಕ್ಸಿಂಗ್ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಿದ್ದಾರೆ. ಬಾಕ್ಸಿಂಗ್ ನಲ್ಲಿ ಮುಂದಿನ ದಿನಗಳಲ್ಲಿ ಅಂತರ್ರಾಷ್ಟ್ರೀಯ ಮಟ್ಟದಲ್ಲಿ ಸಾಧನೆ ಮಾಡಬೇಕೆಂದು ಪಣತೊಟ್ಟಿರುವ ಸ್ಪೂರ್ತಿ ಅದಕ್ಕಾಗಿ ನಿರಂತರ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ.ಸರ್ಕಾರ ಸೇರಿದಂತೆ ಸಂಘ, ಸಂಸ್ಥೆಗಳು ಇವರ ಕ್ರೀಡಾಸಾಧನೆಯನ್ನು ಪರಿಗಣಿಸಿ, ಪ್ರೋತ್ಸಾಹಿಸಿದ್ದೇ ಆದರೆ ಮುಂದಿನ ಅವರ ಸಾಧನೆಗೆ ಸಹಕಾರಿಯಾಗಲಿದೆ. ಅಷ್ಟೇ ಅಲ್ಲದೆ ರಾಜ್ಯಕ್ಕೊಬ್ಬ ಉತ್ತಮ ಮಹಿಳಾ ಬಾಕ್ಸರ್ ನ್ನು ತಯಾರು ಮಾಡಲು ಸಾಧ್ಯವಾಗಲಿದೆ.ಹಾಗೂ ಮೈಸೂರು ವಿಶ್ವವಿದ್ಯಾನಿಲಯ ಕಿಕ್ ಬಾಕ್ಸಿಂಗ್, ಜಶ್ವಂತ್, ರವರ ಮಾರ್ಗದರ್ಶನದಲ್ಲಿ ಇವರು ತರಬೇತಿ ಪಡೆಯುತ್ತಿದ್ದಾರೆ. ಆ ಬಗ್ಗೆ ಸಂಬಂಧಿಸಿದವರು ಗಮನಹರಿಸಲಿ ಎನ್ನುವುದೇ ನಮ್ಮ ಆಶಯವಾಗಿದೆ.

ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್
ತನ್ನ ದುರಾಡಳಿತದಿಂದ ಕೇವಲ 10 ತಿಂಗಳುಗಳಲ್ಲಿ ಕರ್ನಾಟಕವನ್ನು ಹಾಳುಗೆಡುವಿದ ಕಾಂಗ್ರೆಸ್
ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಎಲ್ಲಾ ಸ್ಥಾನಗಳಲ್ಲಿ ಬಿಜೆಪಿಯನ್ನು ಗೆಲ್ಲಿಸುವ ಮೂಲಕ ಕರ್ನಾಟಕದ ಜನತೆ ಕಾಂಗ್ರೆಸ್ಗೆ ತಕ್ಕ ಉತ್ತರ ನೀಡಲಿದ್ದಾರೆ.
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ
ಯಾವುದಾದರೂ ರಾಜಕೀಯ ಪಕ್ಷ SC,ST,OBC ಮೀಸಲಾತಿಯನ್ನು ಲೂಟಿ ಮಾಡಿದ್ದರೆ, ಅದು ಕಾಂಗ್ರೆಸ್ ಪಕ್ಷ ಮಾತ್ರ: ಅಮಿತ್ ಶಾ