ಚಾಮರಾಜನಗರ: ಕಾವೇರಿ ಅಚ್ಚಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ಚಾಮರಾಜನಗರ ತಾಲೂಕಿನ ಆಲೂರಿನಲ್ಲಿ ಕಾಮಯ್ಯನ ತೋಟದ ರಸ್ತೆಯ ಬಳಿ ರಸ್ತೆ ಅಭಿವೃದ್ದಿಗೆ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಜಿ. ನಿಜಗುಣರಾಜು ಅವರು ಕಾವೇರಿ ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ವತಿಯಿಂದ ಕೆಲ ರಸ್ತೆಗಳ ಅಭಿವೃದ್ದಿಯಾಗುತ್ತಿವೆ. ರಸ್ತೆಗಳ ಅಭಿವೃದ್ದಿ ಕಾಮಗಾರಿಗಾಗಿ ೭೫ ಕೋಟಿ ರೂ. ಅನುದಾನ ಕೋರಲಾಗಿದೆ ಎಂದರು.
ತಾಲೂಕಿನ ಸುವರ್ಣಾವತಿ ಜಲಾಶಯ ಆವರಣದಲ್ಲಿ ಮಾಜಿ ರಾಜ್ಯಪಾಲರಾದ ಬಿ. ರಾಚಯ್ಯ ಅವರ ಪ್ರತಿಮೆ ಸ್ಥಾಪಿಸಲು ೨೦ ಲಕ್ಷ ರೂ. ಅನುದಾನ ನಿಗದಿ ಮಾಡಲಾಗಿದೆ. ಈ ಬಗ್ಗೆ ಪತ್ರ ಬರೆದು ತಾಂತ್ರಿಕ ಅನುಮೋದನೆಗಾಗಿ ಕಳುಹಿಸಲಾಗಿದೆ. ಅನುಮೋದನೆ ದೊರೆತ ಕೂಡಲೇ ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗುತ್ತದೆ ಎಂದು ತಿಳಿಸಿದರು.
ಪ್ರಧಾನಿ ಅವರು ಹಾಗೂ ರಾಜ್ಯದ ಮುಖ್ಯಮಂತ್ರಿಯವರ ದೂರದೃಷ್ಠಿಯೇ ಅಭಿವೃದ್ದಿಯಾಗಿದೆ. ರಾಜ್ಯ ಸರ್ಕಾರ ಅಭಿವೃದ್ದಿ ಕಾರ್ಯಗಳಿಗೆ ಆದ್ಯತೆ ನೀಡಿದ್ದು ಹೆಚ್ಚಿನ ಗಮನ ಹರಿಸುತ್ತಿದೆ. ಮುಖ್ಯಮಂತ್ರಿಯವರು ಇತ್ತೀಚೆಗೆ ಜಿಲ್ಲೆಯಲ್ಲಿ ೧೧೦೦ ಕೋಟಿ ರೂ.ಗೂ ಹೆಚ್ಚಿನ ಅಭಿವೃದ್ದಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ ಎಂದರು.
ಮುಖ್ಯಮಂತ್ರಿಯವರು ಜಿಲ್ಲೆಗೆ ಭೇಟಿ ನೀಡಿದ್ದ ವೇಳೆ ಚಾಮರಾಜನಗರ ವೈದ್ಯಕೀಯ ಕಾಲೇಜಿನ ಆಸ್ಪತ್ರೆಗೆ ಎಂ.ಆರ್.ಐ ಸ್ಕ್ಯಾನ್ ಸೌಲಭ್ಯ ಕಲ್ಪಿಸಲು ಮನವಿ ಮಾಡಿ ಮನವರಿಕೆ ಮಾಡಿಕೊಡಲಾಗಿದೆ ಎಂದು ಕಾವೇರಿ ಅಚ್ಚಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಜಿ. ನಿಜಗುಣರಾಜು ಅವರು ತಿಳಿಸಿದರು.