ಮೈಸೂರು: ಈ ದೇಶದ ಆರ್ಥಿಕತೆ ಕೆಳಹಂತದ ದುಡಿಯುವ ಜನರಲ್ಲಿದ್ದು ಈ ಸಮೂದಾಯದವರಿಗೆ ಶಿಕ್ಷಣ ಉದ್ಯೋಗ ನೀಡುವ ಮೂಲಕ ಸಬಲರನ್ನಾಗಿಸಿ ಅವರನ್ನು ಜೊತೆಯಲ್ಲಿ ಕೊಂಡೊಯ್ಯಬೇಕಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೆಳಿದರು.

ಜಿಲ್ಲಾಡಳಿತ ಹಾಗೂ ನಂಜನಗೂಡು ತಾಲೋಕು ಆಡಳಿತದ ವತಿಯಿಂದ ಏರ್ಪಡಿಸಲಾಗಿದ್ದ ನಂಜನಗೂಡು ತಾಲೋಕಿನ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಹಾಗೂ ನುಗು ನದಿಯಿಂದ ಹೆಡಿಯಾಲ ಮತ್ತು 12 ಕೆರೆಗಳಿಗೆ ನೀರು ತುಂಬಿಸುವ ಯೋಜನೆಗಳನ್ನು ಚಾಲನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಅವರು ಮಾತನಾಡಿದರು.

ಈ ಭಾಗದ ಜನರ ಬಹುದಿನಗಳ ಕನಸಾದ ನುಗು ಹಾಗು ಹೆಡಿಯಾಲ ಏತ ನೀರಾವರಿ ಯೋಜನೆಯಿಂದ ಕೆರೆಗಳನ್ನು ತುಂಬಿಸುವ ಮೂಲಕ ಅಂತರ್ಜಲ ವೃದ್ದಿಯಾಗುವುದರೊಂದಿಗೆ ರೈತರು ಸ್ವಾವಲಂಬಿಗಳಾಗಲಿದ್ದಾರೆ ಇದರೊಂದಿಗೆ ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ನೂರಾರು ಕೋಟಿ ಕಾಮಗಾರಿಗಳಿಗೆ ಚಾಲನೆ ದೊರೆಯುತ್ತಿದೆ ಎಂದರು.

ನಮ್ಮ ಸರ್ಕಾರ ಪರಿಶಿಷ್ಟ ಜಾತಿಗೆ ಶೇ 17 ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ 7 ರಷ್ಟು ಮೀಸಲಾತಿಯನ್ನು ನೀಡುವ ಮೂಲಕ ಕ್ರಾಂತಿಕಾರಿ ಹೆಜ್ಜೆ ಇರಿಸಿದೆ. ದಲಿತರು ಹಿಂದುಳಿದವರ ಬಗೆಗೆ ಮಾತನಾಡಿದರೆ ಸಾಲದು ಕೆಲಸ ಮಾಡಿ ತೋರಿಸಬೇಕು, ಅವರು ಸ್ವಾವಲಂಬಿ ಬದುಕು ನಡೆಸಲು ಅವಕಾಶ ಒದಗಿಸಬೇಕು, ಅಂತಹ ಕೆಲಸವನ್ನು ನಮ್ಮ ಸರ್ಕಾರ ಮಾಡಿದೆ ಎಂದರು. ಮೈಸೂರು ಜಿಲ್ಲೆಯಲ್ಲಿ ಪ್ರತಿವರ್ಷ 1 ಸಾವಿರ ಮಕ್ಕಳಿಗೆ ಹಾಸ್ಟೆಲ್ ಸೌಲಭ್ಯ ಒದಗಿಸುವ ಮೂಲಕ ಮುಂದಿನ 5 ವರ್ಷಗಳಲ್ಲಿ ಐದು ಸಾವಿರ ವಿಧ್ಯಾರ್ಥಿಗಳಿಗೆ ಹಾಸ್ಟೆಲ್ ವ್ಯವಸ್ಥೆ ಮಾಡಲಾಗುವುದೆಂದರು.
ದಕ್ಷಿಣದ ಕಾಶಿ ಎಂದೇ ಹೆಸರಾದ ಶ್ರೀರಂಗನಾಥ ದೇವಸ್ಥಾನದ ಆವರಣದಲ್ಲಿ 75 ಕೊಠಡಿಗಳ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದು ಮುಂದಿನ ದಿನಗಳಲ್ಲಿ ನಂಜನಗೂಡು ಅಂತರಾಷ್ಟಿçÃಯ ಮಟ್ಟದ ಪ್ರವಾಸಿ ಕ್ಷೇತ್ರವಾಗಲಿದೆ ಹಾಗೂ ಸಂಸದ ಶ್ರೀನಿವಾಸ್ ಪ್ರಸಾದ್‌ರ ಕನಸಿನ ಯೋಜನೆಯಂತೆ ಎಲ್ಲಾ ಜನಾಂಗಗಳ ಸಮುದಾಯ ಭವನಗಳನ್ನ ಒಂದೇ ಕಡೆ ನಿರ್ಮಾಣ ಮಾಡುವ ಮೂಲಕ ‘ಸಮಾನತೆಯ ಸಂಕೀರ್ಣ’ ನಿರ್ಮಿಸಿ ಸಮಾನತೆಯ ಆಶಯ ಈಡೇರಿಸಲಾಗುವುದೆಂದರು.

ಮಹಿಳೆಯರು, ಯುವಕರ ಪರವಾಗಿ ನಮ್ಮ ಸರ್ಕಾರವಿದ್ದು, ಮಹಿಳೆಯರಿಗಾಗಿ ಸ್ತಿçà ಸಾಮರ್ಥ್ಯ ಯೋಜನೆಯ ಮೂಲಕ ಪ್ರತಿ ಗ್ರಾಮಗಳ 2 ಸಂಘಗಳಿಗೆ ಹಾಗೂ ಯುವಕ ಸ್ವಸಹಾಯ ಸಂಘಗಳಿಗೆ ತಲಾ 5 ಲಕ್ಷ ನೀಡುವ ಯೋಜನೆ ಜಾರಿಗೆ ತರಲಾಗಿದೆ ಮತ್ತು ವಿವಿಧ ವೃತ್ತಿಗಳಲ್ಲಿ ತೊಡಗಿರುವ ಗ್ರಾಮೀಣರಿಗೆ ಕಾಯಕ ಯೋಜನೆ ಜಾರಿಗೆ ತರಲಾಗಿದೆ ಇದರೊಂದಿಗೆ ಮೀನುಗಾರರು, ನೇಕಾರರು,ಡ್ರೆöÊವರ್‌ಗಳ ಮಕ್ಕಳಿಗೆ ವಿದ್ಯಾನಿಧಿ ಜಾರಿಗೆ ತರಲಾಗಿದೆ ಎಂದರು.

ನಮ್ಮ ಸರ್ಕಾರ ತೀವ್ರತೆರನಾದ ಡಯಾಲಿಸಿಸ್ ಮತ್ತು ಕ್ಯಾನ್ಸರ್ ಖಾಯಿಲೆಗಳಿಗೆ ಉಚಿತ ಚಿಕಿತ್ಸೆ ನೀಡುತ್ತಿದೆ ಎಂದರು.

ಜನಪ್ರಿಯ ಶಾಸಕರಾದರೆ ಸಾಲದು : ಕೇವಲ ಜನಪ್ರಿಯ ಶಾಸಕರಾದರೆ ಸಾಲದು, ಜನಪರ ಶಾಸಕರಾಗುವ ಮೂಲಕ ಜನಪರ ಕೆಲಸಗಳನ್ನು ಮಾಡಿ ಜನರಿಗೆ ಉಪಯೋಗ ಆಗಬೇಕು. ಅಂತಹ ಜನಪರ ಕೆಲಸಗಳನ್ನು ಈ ಕ್ಷೇತ್ರದ ಶಾಸಕರು ಮಾಡುತ್ತಾ ಜನಾನುರಾಗಿಯಾಗಿದ್ದಾರೆ ಎಂದರು.

ಚಾಮರಾಜನಗರ ಕ್ಷೇತ್ರದ ಲೋಕಸಭಾ ಸದಸ್ಯರಾದ ವಿ ಶ್ರೀನಿವಾಸ್ ಪ್ರಸಾದ್ ಅವರು ಮಾತನಾಡಿ ಎಲ್ಲರಿಗೂ ಮೀಸಲಾತಿ ಹೆಚ್ಚಳ ಸಾಧ್ಯವಿಲ್ಲ ಶೋಷಿತ ಸಮುದಾಯಗಳನ್ನು ಆರ್ಥಿಕವಾಗಿ, ಶೈಕ್ಷಣಿಕವಾಗಿ ಮತ್ತು ಸಮ ಸಾಮಾಜಿಕವಾಗಿ ಮುನ್ನೆಲೆಗೆ ತರುವ ಉದ್ದೇಶದಿಂದ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಮೀಲಾತಿಯನ್ನು ಜಾರಿಗೊಳಿಸಿದರು. ಆದರೆ, ಈಗ ಇತರೆ ಸಮುದಾಯಗಳೂ ಮೀಸಲಾತಿ ಹೆಚ್ಚಳ ಮಾಡುವಂತೆ ಒತ್ತಡ ಹಾಕುತ್ತಿದ್ದು, ಎಲ್ಲರಿಗೂ ಮೀಸಲಾತಿ ಹೆಚ್ಚಳ ಮಾಡಲು ಒತ್ತಡ ತರುತ್ತಿದ್ದಾರೆ ಎಂದರು.

ರಾಜಕಾರಣಕ್ಕೆ ಬಂದು ನಾಲ್ಕು ದಶಕಗಳು ಕಳೆದಿವೆ. ಕೇಂದ್ರದಲ್ಲಿ ಮತ್ತು ರಾಜ್ಯದಲ್ಲಿ ಮಂತ್ರಿಯಾಗಿದ್ದೇನೆ. ಕೆಲವು ಚುನಾವಣೆಯಲ್ಲಿ ಸೋಲನ್ನು ಕಂಡಿದ್ದೇನೆ. ಸೋತಾಗ ಕುಗ್ಗಿಲ್ಲ , ಗೆದ್ದಾಗ ಹಿಗ್ಗಿಲ್ಲ ಎಂದರು.

ಕೇAದ್ರ ಮತ್ತು ರಾಜ್ಯದಲ್ಲಿ ಬಿಜೆಪಿಯ ಡಬಲ್ ಇಂಜಿನ್ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮಾಜದ ಎಲ್ಲಾ ಸಮುದಾಯಗಳನ್ನು ವಿಶ್ವಾಸಕ್ಕೆ ತೆಗುದುಕೊಂಡು ಕೆಲಸ ಮಾಡುತಿದ್ದಾರೆ. ಪರಿಶಿಷ್ಟ ಸಮುದಾಯಗಳ ಮೀಸಲಾತಿ ಪ್ರಮಾಣವನ್ನು ಹೆಚ್ಚಳ ಮಾಡುವ ಮೂಲಕ ಸರ್ವರನ್ನು ಒಳಗೊಳ್ಳುವಂತಹ ಆಡಳಿತ ನೀಡಿದ್ದಾರೆ. ದಕ್ಷಿಣ ಕಾಶಿ ಎಂದೇ ಪ್ರಖ್ಯಾತಿ ಪಡೆದಿರುವ ಶ್ರೀಕಂಠೇಶ್ವರ ದೇವಾಲಯ ಪ್ರವಾಹ ಬಂದಾಗ ಕಬಿನಿ ಜಲಾಶಯದ ನೀರು ನುಗ್ಗಿ ಅಪಾರ ಹಾನಿವುಂಟಾಗುತ್ತಿದೆ. ಆದ್ದರಿಂದ ಕೂಡಲೆ ಕಬಿನಿ ಜಲಾಶಯಕ್ಕೆ ತಡೆಗೋಡೆ ನಿರ್ಮಾಣ ಮಾಡಬೇಕು ಎಂದು ಮುಂಖ್ಯಮತ್ರಿಗಳ ಬಳಿ ಮನವಿ ಮಾಡಿದರು.

ಜಲಸಂಪನ್ಮೂಲ ಸಚಿವರಾದ ಗೋವಿಂದ ಎಂ. ಕಾರಜೋಳ ಅವರು ಮಾತನಾಡಿ ಕಳೆದ ಮೂರು ವರ್ಷಗಳಿಂದ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಹೊಸ ಕಾಮಗಾರಿ ಹಾಗೂ ಹಳೆ ಕಾಮಗಾರಿ ಸೇರಿ ಸುಮಾರು 5,700 ಕೋಟಿ ರೂಗಳ ಕಾಮಗಾರಿಯನ್ನು ಕಾವೇರಿ ನೀರಾವರಿ ನಿಗಮದಿಂದ ಕೈಗೆತ್ತಿಕೊಂಡಿರುತ್ತೇವೆ 2 ವರ್ಷಗಳಿಂದ ಹೆಚ್ಚು ಮಳೆ ಇರುವುದರಿಂದ 7 ಜಿಲ್ಲೆಯಲ್ಲಿ 818 ಕೆರೆ ಕಟ್ಟೆ ದುರಸ್ತಿ ಕಾರ್ಯ ನಡೆದಿದೆ ನಮ್ಮ ಸರ್ಕಾರ ಸಾಮಾಜಿಕ ನ್ಯಾಯ ಕೊಡುವಂತ ಕೆಲಸ ಮಾಡುತ್ತಿದೆ.

ಕಳೆದ 40 ವರ್ಷ ಹೋರಾಟ ಮಾಡುತ್ತಿರುವ Sಅ Sಖಿ ಜನಾಂಗದವರಿಗೆ ಜನಸಂಖ್ಯೆಕ್ಕೆ ಅನುಗುಣವಾಗಿ ಮೀಸಲಾತಿ ನೀಡುವ ಕೆಲಸ ನಮ್ಮ ಸರ್ಕಾರ ಮಾಡಿದೆ ಎಂದು ಹೇಳಿದರು.

ನಂಜನಗೂಡು ಕ್ಷೇತ್ರದ ವಿಧಾನಸಭಾ ಶಾಸಕರಾದ ಹರ್ಷವರ್ಧನ್ ಅವರು ಮಾತನಾಡಿ ನಂಜನಗೂಡು ತಾಲ್ಲೂಕಿನ ಸಮಗ್ರ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಲಾಗುತ್ತಿದೆ ಸಾಕಷ್ಟು ಕಾಮಗಾರಿಗಳನ್ನು ಈ 3 ವರ್ಷ ಮಾಡಲಾಗಿದೆ ಪ್ರಮುಖವಾಗಿ ನುಗು ಜಲಾಶಯದ ಅಭಿವೃದ್ಧಿ ಯಿಂದ ನಂಜನಗೂಡಿನ 20 ಕೆರೆಗಳು ಬರಲಿದೆ ಇದರಿಂದ ಜಲಸಂಪನ್ಮೂಲ ಹೆಚ್ಚಲಿದೆ ಹಾಗೂ ಮುಂದಿನ ದಿನಗಳಲ್ಲಿ ನಂಜನಗೂಡಿನ ನದಿಯಲ್ಲಿ ತಡೆಗೋಡೆ ನಿರ್ಮಾಣ ಮಾಡಲು ಸುಮಾರು 50 ಕೋಟಿ ವೆಚ್ಚ ತಗಲಿದೇ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.

ಕಾರ್ಯಕ್ರಮದಲ್ಲಿ ಗುಂಡ್ಲುಪೇಟೆ ಶಾಸಕರಾದ ನಿರಂಜನಕುಮಾರ್, ಹೆಚ್.ಎಸ್. ಮಹದೇವಸ್ವಾಮಿ. ಪ್ರಾದೇಶಿಕ ಆಯುಕ್ತರಾದ ಪ್ರಕಾಶ್. ಡಾ.ಕೆ.ವಿ. ರಾಜೇಂದ್ರ. ಜಿಲ್ಲಾ ಪಂಚಾಯತ್ ಕಾರ್ಯನಿರ್ವಹಣಾಧಿಕಾರಿಗಳಾದ ಪೂರ್ಣಿಮ. ಎಸ್.ಪಿ. ಚೇತನ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.