ಚಾಮರಾಜನಗರ: ಜಿಲ್ಲೆಯ ಪ್ರಸಿದ್ದಯಾತ್ರಾಸ್ಥಳ ಮಲೆಮಹದೇಶ್ವರಬೆಟ್ಟಕ್ಕೆ ಸೈಕಲ್ ಯಾತ್ರೆ ಆರಂಭದ ೨೬ ನೇ ವಾರ್ಷಿಕೋತ್ಸವ ಸಂಬಂಧ ತಾಲೂಕಿನ ದೊಡ್ಡಮೋಳೆ ಗ್ರಾಮದಲ್ಲಿ ನಡೆದ ವಾರ್ಷಿಕೋತ್ಸವಕ್ಕೆ ಹುಲಿವಾಹನಕ್ಕೆ ಶಾಸಕ ಸಿ.ಪುಟ್ಟರಂಗಶೆಟ್ಟಿ ವಿಶೇಷಪೂಜೆ ನೆರವೇರಿಸಿದರು.
ನಂತರ ಮಾತನಾಡಿದ ಅವರು’ ಈಭಾಗದ ದೇವರಾದ ಮಲೆಮಹದೇಶ್ವರಬೆಟ್ಟಕ್ಕೆ ಕಳೆದ ೨೬ವರ್ಷಗಳಿಂದ ಗ್ರಾಮಸ್ಥರು ಸೈಕಲ್ ಯಾತ್ರೆ ಆರಂಭಿಸಿ, ಇಂದಿಗೂ ಅದನ್ನು ಮುಂದುವರೆಸಿಕೊಂಡು ಬಂದಿರುವುದು ಪ್ರಶಂಸನೀಯ, ಹಿಂದಿನ ಸಂಪ್ರದಾಯ, ಸಂಸ್ಕೃತಿ ಸಂಸ್ಕಾರ ಉಳಿಸಿ,ಮುಂದಿನ ಪೀಳಿಗೆಯವರಿಗೆ ಮನದಟ್ಟು ಮಾಡಿಕೊಡಬೇಕು, ಜತೆಗೆ ಸಮುದಾಯದ ಮಕ್ಕಳಿಗೆ ಗುಣಮಟ್ಟದ ಶಿಕ್ಷಣಕೊಡಿಸಲು ಪೋಷಕರು ಮುಂದಾಗಬೇಕು ಎಂದು ಸಲಹೆ ನೀಡಿದರು. ಇದೇ ಸಂದರ್ಭದಲ್ಲಿ ಭಕ್ತಾದಿಗಳಿಗೆ ಅನ್ನಸಂತರ್ಪಣೆ ನಡೆಯಿತು.
ತಾಪಂ ಮಾಜಿಸದಸ್ಯ ಪುಟ್ಟಸ್ವಾಮಿ, ದೊರೆಸ್ವಾಮಿ, ರಾಜಣ್ಣ, ಪ್ರಕಾಶ್, ರಂಗನಾಥ್, ಗ್ರಾಮಸ್ಥರು, ಮುಖಂಡರು ಹಾಜರಿದ್ದರು.