ಚಾಮರಾಜನಗರ,ನ.೨೦: ತಾಲೂಕಿನ ನಾಗವಳ್ಳಿ ಗ್ರಾಮದ ಉಪ್ಪಾರ ಬಡಾವಣೆಯಲ್ಲಿ ಶ್ರೀ ಅಯ್ಯಪ್ಪಸ್ವಾಮಿ ಭಕ್ತ ಮಂಡಳಿ ವತಿಯಿಂದ ೨೯ನೇ ವರ್ಷದ ಶ್ರೀ ಅಯ್ಯಪ್ಪಸ್ವಾಮಿ ಪೂಜಾ ಮಹೋತ್ಸವವು ಗುರುಗಳ ಸಮ್ಮುಖದಲ್ಲಿ ಭಕ್ತಿಪೂರಕವಾಗಿ ಜರುಗಿತು.
ಗ್ರಾಮದ ಬಡಾವಣೆಗಳಲ್ಲಿ ಸತ್ತಿಗೆ-ಸುರಪಾನಿ ವಾದ್ಯಗೋಷ್ಠಿಗಳೊಂದಿಗೆ ಕಂಡಾಯ ಮೆರವಣಿಗೆ ವಿಜೃಂಭಣೆಯಿಂದ ಸಾಗಿತು. ೧೦೧ ಹೆಣ್ಣು ಮಕ್ಕಳು ಹಾಲರವೆ ಉತ್ಸವದೊಂದಿಗೆ ಮೆರವಣಿಗೆಯಲ್ಲಿ ಸಾಗಿದರು.ಗ್ರಾಮದ ಪ್ರಮುಖ ಬೀದಿಗಳು ತಳಿರು-ತೋರಣಗಳಿಂದ ಅಲಂಕೃತಗೊಂಡು ಕಂಡಾಯ ಮೆರವಣಿಗೆ ಉದ್ದಕ್ಕೂ ರಂಗೋಲಿ ಹಾಕಿ ಮೆರವಣಿಗೆಗೆ ಪೂರ್ಣಕುಂಭ ಸ್ವಾಗತವನ್ನು ಭಕ್ತಾಧಿಗಳು ಕೋರಿದರು.
ಈ ಸಂದರ್ಭದಲ್ಲಿ ಶಾಸಕ ಸಿ.ಪುಟ್ಟರಂಗಶೆಟ್ಟಿ ವರು ಸಹ ತೆರಳಇ ಪೂಜಾ ಕಾರ್ಯದಲ್ಲಿ ಭಾಗವಹಿಸಿ ವಿಶೇಷ ಪೂಜೆ ಸಲ್ಲಿಸಿದರು. ನಾಡಿಗೆ ಉತ್ತಮ ಮಳೆ-ಬೆಳೆಯಾಗಿ ಜನರು ಸಮೃದ್ದಿಯಿಂದ ಜೀವನ ನಡೆಸಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ಶಾಸಕರು ತಿಳಿಸಿದರು.
ಈ ಪೂಜಾ ಕಾರ್ಯದಲ್ಲಿ ತಾ.ಪಂ ಮಾಜಿ ಅಧ್ಯಕ್ಷ ಚಿಕ್ಕಮಹದೇವು, ಎಪಿಎಂಸಿ ನಿರ್ದೇಶಕ ಪ್ರದೀಪ್ ಕುಮಾರ್,ಗ್ರಾ.ಪಂ ಉಪಾಧ್ಯಕ್ಷೆ ಭಾಗ್ಯ ಶ್ರೀನಿವಾಸ್ ಸೇರಿದಂತೆ ಅಯ್ಯಪ್ಪಸ್ವಾಮಿ ಭಕ್ತರು,ಉಪ್ಪಾರ ಸಮುದಾಯದ ಯಜಮಾನರುಗಳು, ಕುಲಸ್ಥರು ಪಾಲ್ಗೊಂಡಿದ್ದರು.
