ಚಾಮರಾಜನಗರ: ಗ್ರಾಮೀಣ ಭಾಗದಲ್ಲಿರುವ ರೈತರು ಸರ್ಕಾರ ವಿವಿಧ ಇಲಾಖೆಗಳ ಸೌಲಭ್ಯಗಳನ್ನು ಪಡೆದು ಹೆಚ್ಚು ಸದೃಢರಾಗಬೇಕು ಎಂದು ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರವರು ತಿಳಿಸಿದರು.
ಪಟ್ಟಣದ ಹೊರವಲಯದಲ್ಲಿರುವ ಮಹದೇಶ್ವರ ಕ್ರೀಡಾಂಗಣದಲ್ಲಿಂದು ಜಿಲ್ಲಾ ಆಡಳಿತ ಮತ್ತು ಜಿಲ್ಲಾ ಪಂಚಾಯತ್ ವತಿಯಿಂದ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳ ವಿವಿಧ ಇಲಾಖೆಗಳ ಅಭಿವೃದ್ಧಿ ಕಾಮಗಾರಿಗಳ ಶುಂಕುಸ್ಥಾಪನಾ ಹಾಗೂ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.
ರೈತರ ಮಕ್ಕಳಿಗೆ ಗುಣಮಟ್ಟ ಶಿಕ್ಷಣದ ಜತೆಗೆ ವಿದ್ಯಾನಿಧಿ,ಸ್ವ ಉದ್ಯೋಗ ತರಬೇತಿಕಲ್ಪಿಸುವಂತ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ. ರೈತರಿಗೆ ಬಡ್ಡಿ ರಹಿತ ಸಾಲಗಳನ್ನು ನೀಡಲಾಗುತ್ತಿದೆ ಹಾಗೂ ಹಾಲು ಉತ್ಪಾದಕ ರೈತರಿಗೆ ವಿಶೇ? ಅನುದಾನವನ್ನು ನೀಡಲಾಗುತ್ತಿದ್ದು ಸರ್ಕಾರದ ಈ ಮಹತ್ತರ ಯೋಜನೆಗಳ ಸದಪಯೋಗ ಪಡೆದುಕೊಳ್ಳಬೇಕು ಎಂದು ಮಾನ್ಯ ಮುಖ್ಯ ಮಂತ್ರಿ ರವರು ತಿಳಿಸಿದರು.
ಕೃಷಿಯನ್ನು ಹೆಚ್ಚು ಅವಲಂಬಿಸಿರುವ ಈ ಭಾಗದ ಜನರಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕೆರೆಗಳಿಗೆ ನೀರು ತುಂಬಿಸುವಂತ ಮಹತ್ವಾಕಾಂಕ್ಷೆಯ ಕಾಮಗಾರಿಯನ್ನು ಉದ್ಘಾಟಿಸಿದ್ದು ಈ ಯೋಜನೆಯು ರೈತರಿಗೆ ಹೆಚ್ಚಿನ ವರದಾನವಾಗಲಿದೆ ಎಂದರು.
ದುಡಿಯುವ ವರ್ಗದವರಿಗೆ ಗೌರವ ಜತೆಗೆ ಆರ್ಥಿಕ ಸ್ಥಾನಮಾನ ನೀಡುವಂತೆ ಸರ್ಕಾರ ಅನೇಕ ಸೌಲಭ್ಯಗಳನ್ನು ಒದಗಿಸಿರುವ ಹಿನ್ನೆಲೆಯಲ್ಲಿ ಗ್ರಾಮೀಣ ಮಟ್ಟದಲ್ಲಿ ಸ್ತ್ರೀ ಸಾಮಾನ್ಯರು ಹಾಗೂ ಯುವಕರು ಸಂಘ ಸಂಸ್ಥೆಗಳ ಮೂಲಕ ಪ್ರತಿ ಗ್ರಾಮಕ್ಕೆ ಎರಡು ಸಂಘಗಳಿಗೆ ೫ ಲಕ್ಷ ರೂಗಳ ಸಾಲ ಸೌಲಭ್ಯ ನೀಡಿ ಸ್ವಾವಲಂಬಿಗಳಾಗಿಸಿ ರೂಪಿಸಿದೆ ಎಂದು ತಿಳಿಸಿದರು.
ಪ್ರತಿಯೊಂದು ಮನೆಗೂ ಶುದ್ಧ ಕುಡಿಯುವ ನೀರನ್ನು ನೀಡಬೇಕು ಎಂಬ ಮಾನ್ಯ ಪ್ರಧಾನ ಮಂತ್ರಿಗಳು ಘೋಷಿಸಿದ್ದು ರಾಜ್ಯದಲ್ಲಿ ೩೦ಲಕ್ಷ ಕುಟುಂಬಗಳಿಗೆ ಶುದ್ಧ ಕುಡಿಯುವ ನೀರನ್ನು ಜಲ ಜೀವನ್ ಮಿ?ನ್ ಯೋಜನೆಯಡಿ ಸಮರ್ಪಕವಾಗಿ ಪೂರೈಸಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ರವರು ತಿಳಿಸಿದರು.
ಕೊಳ್ಳೆಗಾಲದ ಕ್ಷೇತ್ರ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವಂತೆ ಮನವಿ ಮಾಡಿದ ಶಾಸಕ ಮಹೇಶ್ ರವರ ಮನವಿಗೆ ಸ್ಪಂದಿಸಿದ ಮುಖ್ಯ ಮಂತ್ರಿಗಳು ಕ್ರಮ ಕೈಗೊಳ್ಳಲಾಗುವುದು ಎಂದರು.
ಜಾಗೇರಿ ಗ್ರಾಮದ ಜಮೀನು ವಿವಾಧದ ಬಗ್ಗೆ ಅಧಿಕಾರಿಗಳಿಗೆ ವರದಿ ಸಲ್ಲಿಸಲು ಈಗಾಗಲೇ ಸೂಚಿಸಿದ್ದು ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ. ಸಭೆ ನಡೆಸಿ ಅಗತ್ಯ ಕ್ರಮ ವಹಿಸುವುದಾಗಿ ಮುಖ್ಯ ಮಂತ್ರಿಗಳು ತಿಳಿಸಿದರು.
ಹನೂರು ಕ್ಷೇತ್ರದ ಶಾಸಕ ನರೇಂದ್ರ ರವರ ಮನವಿಯಂತೆ ಪಟ್ಟಣದಲ್ಲಿರುವ ಆರೋಗ್ಯ ಕೇಂದ್ರಕ್ಕೆ ನೂರು ಹಾಸಿಗೆಯುಳ್ಳ ಆಸ್ಪತ್ರೆ ವ್ಯವಸ್ಥೆ ಕಲ್ಪಿಸುವುದಕ್ಕೆ ಸೂಚಿಸಿದರು.
ವಸತಿ ಮತ್ತು ಮೂಲ ಸೌಲಭ್ಯ ಅಭಿವೃದ್ಧಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ರವರು ಮಾತನಾಡಿ ಜಿಲ್ಲೆಯ ಕೆರೆಗಳಿಗೆ ನೀರು ತುಂಬಿಸುವ ಕಾರ್ಯದಲ್ಲಿ ಮುಖ್ಯ ಮಂತ್ರಿಗಳ ಶ್ರಮ ಅಪಾರವೆಂದು ಶ್ಲಾಘಿಸಿದರು. ಜಿಲ್ಲೆಯಲ್ಲಿ ಹಿಂದುಳಿದಿರುವ ಕ್ಷೇತ್ರಗಳಿಗೆ ಭೇಟಿನೀಡಿ ಜಿಲ್ಲೆಯ ಅಭಿವೃದ್ಧಿಗೆ ಪೂರಕವಾದ ಅನೇಕ ಯೋಜನೆಗಳನ್ನು ರೂಪಿಸಲಾಗಿದೆ ಎಂದು ತಿಳಿಸಿದರು.
ಕಂದಾಯ ಸಚಿವರಾದ ಆರ್. ಅಶೋಕ್ ರವರು ಮಾತನಾಡಿ ಮುಖ್ಯ ಮಂತ್ರಿಗಳು ಜಿಲ್ಲೆಗೆ ಎರಡು ಬಾರಿ ಭೇಟಿ ನೀಡಿದ್ದಾರೆ. ಸರ್ಕಾರಿ ಜಮೀನಿನಲ್ಲಿ ಉಳುಮೆ ಮಾಡುತ್ತಿರುವ ರೈತರು ಸಾಗುವಲಿ ಅರ್ಜಿ ಸಲ್ಲಿಸಿರುವವರಿಗೆ ಇನ್ನು ಒಂದು ಅವಕಾಶ ನೀಡಿದ್ದು ಅವರಿಗೆ ಸರ್ಕಾರ ಹಕ್ಕುಪತ್ರ ನೀಡಲಾಗುತ್ತದೆ ಎಂದು ತಿಳಿಸಿದರು.
ಸರ್ಕಾರ ಮನೆ ಬಾಗಿಲಿಗೆಪಿಂಚಣಿ ಹಾಗೂ ಇತರೆ ಸೌಲಭ್ಯಗಳನ್ನು ಜನ ಸಾಮಾನ್ಯರ ಮನೆ ಬಾಗಿಲಿಗೆ ನೀಡುತ್ತಿದ್ದು ತುಡಿತಕ್ಕೆ ಒಳಗಾದ ಜನರ ಪರ ಸರ್ಕಾರ ಕಾರ್ಯ ಕ್ರಮಗಳನ್ನು ರೂಪಿಸುತ್ತಿದೆ ಎಂದು ಕಂದಾಯ ಸಚಿವರಾದ ಆರ್. ಅಶೋಕ್ ರವರು ತಿಳಿಸಿದರು.
ಕೊಳ್ಳೇಗಾಲ ಹಾಗೂ ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲಿಂದು ವಿವಿಧ ಕಾಮಗಾರಿಗಳು ಉದ್ಘಾಟನಾ ಮತ್ತು ಶಂಕುಸ್ಥಾಪನೆಯಾಗುತ್ತಿರುವುದು ಬಹಳ ಸಂತೋ?ವಾಗಿದ್ದು, ಬಹಳ ಪ್ರಮುಖವಾಗಿ ೯೮ ಗ್ರಾಮಗಳಿಗೆ ಕುಡಿಯುವ ನೀರು ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಹನೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಆರ್. ನರೇಂದ್ರ ರವರು ತಿಳಿಸಿದರು.
ಮಲೆ ಮಹದೇಶ್ವರ ಬೆಟ್ಟಕ್ಕೆ ಹೊರ ರಾಜ್ಯ ಹಾಗೂ ಜಿಲ್ಲೆಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ದರ್ಶನಕ್ಕೆ ಆಗಮಿಸುತ್ತಿದ್ದು ಈ ಮಾರ್ಗಕ್ಕೆ ಉತ್ತಮವಾದ ರಸ್ತೆ ಸೌಲಭ್ಯವನ್ನು ಕಲ್ಪಿಸಬೇಕು, ರಾಮಪುರ ಆಸ್ಪತ್ರೆಯಲ್ಲಿ ಡಯಾಲಿಸಿಸ್ ವ್ಯವಸ್ಥೆ ಕಲ್ಪಿಸಬೇಕು ಮತ್ತು ಮಳೆಹಾನಿ ಯಿಂದ ಹಾನಿಗೊಳಗಾದ ರಸ್ತೆ ಕಾಮಗಾರಿಗಳನ್ನು ತ್ವರಿತವಾಗಿ ದುರಸ್ತಿ ಮಾಡಿಸಬೇಕು ಎಂದು ಮಾನ್ಯ ಮುಖ್ಯ ಮಂತ್ರಿಗಳಿಗೆ ಮನವಿ ಮಾಡಿದರು.
ನಂತರದಲ್ಲಿ ಕೊಳ್ಳೇಗಾಲ ವಿಧಾನ ಸಭಾ ಶಾಸಕ ಎನ್. ಮಹೇಶ್ ರವರು ಮಾತನಾಡಿ ಮುಖ್ಯಮಂತ್ರಿಗಳು ಜನ ಸಾಮಾನ್ಯರ ಮುಖ್ಯ ಮಂತ್ರಿಗಳಾಗಿದ್ದು ಜನರ ಪ್ರೀತಿ, ವಿಶ್ವಾಸಗಳಿಸುವಲ್ಲಿ ಯಶಸ್ವಿನಾಯಕರಾಗಿದ್ದಾರೆ ಎಂದು ಬಣ್ಣಿಸಿದರು.
ಕೊಳ್ಳೇಗಾಲ ಕ್ಷೇತ್ರ ವ್ಯಾಪ್ತಿಯಲ್ಲಿ ಕೆರೆಗಳಿಗೆ ನೀರು ತುಂಬಿಸುವಂತೆ ಮತ್ತು ಚಾಮುಲ್ ಗೆ ಹೆಚ್ಚಿನ ಅನುದಾನ ಬಿಡುಗಡೆಗೊಳಿಸಿ ರೈತರಿಗೆ ಸಹಕಾರಿ ಯಾಗುವಂತೆ ಇತ್ಯಾದಿ ಮನವಿಯನ್ನು ಮಾನ್ಯ ಮುಖ್ಯ ಮಂತ್ರಿಗಳಿಗೆ ಸಲ್ಲಿಸಿದರು.
ಇದೇ ವೇಳೆ ಅಮೃತ ಗ್ರಾಮ ಪಂಚಾಯತಿಗಳಿಗೆ, ಸ್ವ ಸಹಾಯದ ಸಂಘದ ಸದಸ್ಯರಿಗೆ ಹಾಗೂ ವಸತಿ ಯೋಜನೆಯ ಫಲಾನುಭವಿಗಳಿಗೆ ಮಾನ್ಯ ಮುಖ್ಯ ಮಂತ್ರಿಗಳು ಚೆಕ್ ಮತ್ತು ಆದೇಶ ಪ್ರತಿ ವಿತರಿಸಿದರು.
ಇದೇ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಗುಂಡ್ಲುಪೇಟೆ ವಿಧಾನಸಭಾ ಶಾಸಕರಾದ ಸಿ.ಎಸ್. ನಿರಂಜನ್ ಕುಮಾರ್, ಹನೂರು ಪಟ್ಟಣ ಪಂಚಾಯಿತಿಯ ಅಧ್ಯಕ್ಷರಾದ ಚಂದ್ರಮ್ಮ, ಸದಸ್ಯರಾದ ಪವಿತ್ರ, ಜಿಲ್ಲಾಧಿಕಾರಿ ಡಿ.ಎಸ್. ರಮೇಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕಾಧಿಕಾರಿ ಕೆ.ಎಂ. ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿ?ಧಿಕಾರಿ ಟಿ.ಪಿ.ಶಿವಕುಮಾರ್, ಜಿಲ್ಲಾ ಆರೋಗ್ಯಾಧಿಕಾರಿ ವಿಶ್ವೇಶ್ವರಯ್ಯ, ಉಪ ವಿಭಾಗಿಯಾಧಿಕಾರಿ ಗೀತಾ ಉಡೇದ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
