
ಚಾಮರಾಜನಗರ: ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯ, ಸವಲತ್ತುಗಳನ್ನು ಸದ್ಭಳಕೆ ಮಾಡಿಕೊಂಡರೆ ತಾಯಿ ಮತ್ತು ಮಕ್ಕಳ ಆರೋಗ್ಯ ಸುರಕ್ಷತೆಯಿಂದ ಕೂಡಿರುತ್ತದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ.ಎಂ. ಗಾಯತ್ರಿ ಅವರು ತಿಳಿಸಿದರು.
ನಗರದ ಜಿಲ್ಲಾಡಳಿತ ಭವನದ ಹಳೇ ಕೆಡಿಪಿ ಸಭಾಂಗಣದಲ್ಲಿ ಜಿಲ್ಲಾ ಪಂಚಾಯತ್, ಯೂನಿಸೆಫ್ ಮತ್ತು ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆ ಸಹಯೋಗದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಮತ್ತು ಸಮಾಲೋಚಕರಿಗೆ ಆಯೋಜಿಸಿದ್ದ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ತಂತ್ರಜ್ಞಾನದ ಎಷ್ಟೇ ಮುಂದುವರೆದರೂ ಸಂವಹನ ಕೊರತೆಯಿಂದಾಗಿ ಜನರಲ್ಲಿ ಅರಿವಿನ ಅಗತ್ಯವಿದೆ. ತಾಯಿಯಾದ ಮೊದಲ ದಿನದಿಂದ ಸರ್ಕಾರದ ಎಲ್ಲ ಸವಲತ್ತುಗಳನ್ನು ಸಮರ್ಪಕವಾಗಿ ಬಳಸಿಕೊಂಡರೆ ತಾಯಿ ಮತ್ತು ಮಕ್ಕಳ ಆರೋಗ್ಯದಲ್ಲಿ ಸುರಕ್ಷತೆ ಕಾಪಾಡಿಕೊಳ್ಳಬಹುದು. ಈ ನಿಟ್ಟಿನಲ್ಲಿ ಮಕ್ಕಳಿಗೆ, ವಯಸ್ಕರಿಗೆ ಸ್ವಚ್ಛತೆಯ ಬಗ್ಗೆ ಅರಿವು ಮೂಡಿಸಲು ತರಬೇತಿ ನೀಡಲಾಗುತ್ತಿದೆ ಎಂದರು.
ಚಾಮರಾಜನಗರ ಗಡಿಭಾಗದ ಜಿಲ್ಲೆಯಾಗಿದ್ದು, ತರಬೇತಿ ಪಡೆದವರು ಎಲ್ಲರೊಂದಿಗೆ ಆತ್ಮೀಯವಾಗಿ ಮಾತನಾಡಿ ಜನರಿಗೆ ಅರಿವು ಮೂಡಿಸಬೇಕು. ಮಾರಣಾಂತಿಕ ಕಾಯಿಲೆಗಳ ಬಗ್ಗೆಯೂ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ. ಈ ಬಗ್ಗೆ ನೋಡಲ್ ಅಧಿಕಾರಿಗಳಿಗೆ ತರಬೇತಿ ನೀಡಲಾಗುತ್ತಿದೆ. ಕಳೆದ ಎರಡು ವ?ಗಳಿಂದ ಉಂಟಾದ ಕೋವಿಡ್ ಹಿನ್ನೆಲೆಯಲ್ಲಿ ಜನರು ಸುರಕ್ಷತೆಗಾಗಿ ಹಲವು ಬದಲಾವಣೆಗೆ ಹೊಂದಿಕೊಂಡಿದ್ದಾರೆ ಎಂದು ತಿಳಿಸಿದರು.
ಮಾಸ್ಕ್ ಬಳಸುವುದು, ಸ್ವಚ್ಚತೆಗಾಗಿ ಕೈ ತೊಳೆಯುವ ಅಭ್ಯಾಸಗಳನ್ನು ನಿರಂತರವಾಗಿ ಅಳವಡಿಸಿಕೊಳ್ಳುವುದರಿಂದ ಮಾರಕ ಕಾಯಿಲೆಗಳಿಂದ ರಕ್ಷಣೆ ಪಡೆಯಬಹುದು. ಇದಕ್ಕಾಗಿ ಹಲವು ಸ್ವಚ್ಚತಾ ನಿಯಮಗಳನ್ನು ಕಟ್ಟುನಿಟ್ಟಾಗಿ ನಾಗರಿಕರು ಪಾಲಿಸಬೇಕು ಎಂದು ಜಿ. ಪಂ. ಸಿಇಒ ಕೆ.ಎಂ. ಗಾಯಿತ್ರಿ ಅವರು ತಿಳಿಸಿದರು.
ಯುನಿಸೆಫ್ ರಾಜ್ಯ ಸಂಯೋಜಕ ಮನೋಜ್ ಸಬಾಸ್ಟಿಯನ್ ಅವರು ಮಾತನಾಡಿ ಕಳೆದ ಒಂದು ವ?ದಿಂದ ಈ ಸಂಸ್ಥೆ ಜಾರಿಯಲ್ಲಿದ್ದು, ಕೋವಿಡ್ ಸಂದರ್ಭದಲ್ಲಿ ಆರ್ಸಿಸಿ ಎಂಬ ಹೆಸರಿನಲ್ಲಿ ಕಾರ್ಯ ನಿರ್ವಹಿಸುತ್ತಿತ್ತು. ಪ್ರತಿ ಜಿಲ್ಲೆಯಲ್ಲೂ ಸಹ ಈ ಕಾರ್ಯಕ್ರಮವನ್ನು ಅನು?ನಗೊಳಿಸುವುದು ಸೇರಿದಂತೆ ಇತರೆ ರೋಗಗಳನ್ನು ತಡೆಗಟ್ಟುವ ಬಗ್ಗೆ ಈ ಕಾರ್ಯಕ್ರಮದಡಿ ಅರಿವು ಮೂಡಿಸಲಾಗುತ್ತಿದೆ. ಪ್ರತಿಯೊಬ್ಬರಿಗೂ ಸಂವಹನದ ಕೌಶಲ್ಯದ ಅಗತ್ಯವಿದೆ ಎಂದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಂ. ವಿಶ್ವೇಶ್ವರಯ್ಯ, ಯೂನಿಸೆಫ್ ಮತ್ತು ಆರೋಗ್ಯ ನಿರ್ವಹಣಾ ಸಂಶೋಧನಾ ಸಂಸ್ಥೆಯ ವಿಭಾಗದ ಪ್ರಾದೇಶಿಕ ಸಂಯೋಜಕ ಡಾ. ರವೀಶ್, ಬಿ. ಸುರೇಶ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
