ಚಾಮರಾಜನಗರ: ಶ್ರೀ ಭಗವದ್ಗೀತಾ ಅಭಿಯಾನ, ಶ್ರೀ ಸರ್ವಜ್ಞೆಂದ್ರ ಸರಸ್ವತಿ ಪ್ರತಿಷ್ಠಾನ, ಶ್ರೀ ಸೋಂದ ಸ್ವರ್ಣವಲ್ಲಿ ಮಹಾಸಂಸ್ಥಾನ, ಶಿರಸಿ ಉತ್ತರ ಕನ್ನಡ , ಕರ್ನಾಟಕ, ಚಾಮರಾಜನಗರ ಜಿಲ್ಲಾ ಭಗವದ್ಗೀತಾ ಅಭಿಯಾನ ಸಮಿತಿ 20 22 ಇವರ ಆಶ್ರಯದಲ್ಲಿ ದಿನಾಂಕ 19 ರ ಬುಧವಾರ ಮಧ್ಯಾಹ್ನ 3:00ಗೆ ಜಿಲ್ಲಾಡಳಿತ ಭವನದ ವರನಟ ಡಾ. ರಾಜಕುಮಾರ್ ರಂಗಮಂದಿರದಲ್ಲಿ ಚಾಮರಾಜನಗರ ಜಿಲ್ಲಾ ಭಗವದ್ಗೀತಾ ಅಭಿಯಾನ ಉದ್ಘಾಟನಾ ಸಮಾರಂಭವನ್ನು ಏರ್ಪಡಿಸಲಾಗಿದೆ ಎಂದು ಶ್ರೀ ಭಗವದ್ಗೀತಾ ಅಭಿಯಾನದ ಜಿಲ್ಲಾ ಪ್ರಮುಖರಾದ ಸುರೇಶ್ ಎಸ್ ಮತ್ತು ಚಂದಕ ವಾಡಿ ಕೇಶವಮೂರ್ತಿ ರವರು ತಿಳಿಸಿದ್ದಾರೆ.

ಉದ್ಘಾಟನೆ ಮತ್ತು ದಿವ್ಯಸಾನಿಧ್ಯವನ್ನು ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಶ್ರೀ ಶ್ರೀ ಮದ್ ಗಂಗಾಧರೇಂದ್ರ ಸರಸ್ವತಿ ಮಹಾ ಸ್ವಾಮಿಗಳವರು ನೆರವೇರಿಸುವರು. ಹರವೇ ವಿರಕ್ತ ಮಠಧ್ಯಕ್ಷರಾದ ಶ್ರೀ ಸರ್ಪಭೂಷಣ ಸ್ವಾಮಿಯವರು, ಶ್ರೀ ಮರಿಯಾಲ ಶ್ರೀ ಮುರುಘರಾಜೇಂದ್ರ ಮಹಾ ಸಂಸ್ಥಾನದ ಶ್ರೀ ಇಮ್ಮಡಿ ಮುರುಘ ರಾಜೇಂದ್ರ ಸ್ವಾಮಿಯವರು, ಚಾಮರಾಜನಗರದ ಶ್ರೀ ಸಿದ್ದಮಲ್ಲೇಶ್ವರ ವಿರಕ್ತ ಮಠದ ಶ್ರೀ ಚನ್ನಬಸವ ಸ್ವಾಮಿಯವರು, ಹಾಗೂ ಪ್ರಜಾಪಿತ ಬ್ರಹ್ಮಾ ಕುಮಾರಿ ಈಶ್ವರಿ ವಿಶ್ವವಿದ್ಯಾಲಯದ ರಾಜಯೋಗಿನಿ ಬಿಕೆ ದಾನೇಶ್ವರಿ ರವರು ಆಗಮಿಸುವರು.

ಮುಖ್ಯ ಅತಿಥಿಗಳಾಗಿ ಅಪರ ಜಿಲ್ಲಾಧಿಕಾರಿಗಳಾದ ಕಾತ್ಯಾಯಿನಿ ದೇವಿ.ಎಸ್. ರವರು, ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಮಂಜುನಾಥ್ ರವರು, ತಾಲೂಕು ಪಂಚಾಯಿತಿ ಮಾಜಿ ಅಧ್ಯಕ್ಷರಾದ ಉಡಿಗಾಲ ಕುಮಾರಸ್ವಾಮಿ ಆಗಮಿಸುತ್ತಾರೆ.

ಅಧ್ಯಕ್ಷತೆಯನ್ನು ಶ್ರೀ ಭಗವದ್ಗೀತಾ ಅಭಿಯಾನದ ಜಿಲ್ಲಾಧ್ಯಕ್ಷರಾದ ದುಗ್ಗಟ್ಟಿ ಮಲ್ಲಿಕಾರ್ಜುನ ಸ್ವಾಮಿ ವಹಿಸುವರು.

ಜಿಲ್ಲಾ ಭಗವದ್ಗೀತಾ ಅಭಿಯಾನದ ಗೌರವ ಅಧ್ಯಕ್ಷರಾದ ಜಿಎಂ ಹೆಗಡೆ, ಕಾರ್ಯಾಧ್ಯಕ್ಷರಾದ ಎಸ್ ಬಾಲಸುಬ್ರಹ್ಮಣ್ಯಂ, ಚಾಮರಾಜನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷರಾದ ಸುರೇಶ್ ಎನ್ ಋಗ್ವೇದಿ ಉಪಸ್ಥಿತರಿರುವರು.

ಹೆಚ್ಚಿನ ಸಂಖ್ಯೆಯಲ್ಲಿ ಸಾರ್ವಜನಿಕರು ಆಗಮಿಸಿ ಈ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿ ಕೊಡಬೇಕೆಂದು ಕೋರುತ್ತೇವೆ.