ಗುಂಡ್ಲುಪೇಟೆ: ತಾಲ್ಲೂಕಿನ ಬೇಗೂರು ಹೋಬಳಿಯ ಐದು ಕೆರೆಗಳಿಗೆ ನೀರು ತುಂಬಿಸುವ ಸರ್ಕಾರದ ಕಾರ್ಯಕ್ರಮದಲ್ಲಿ ಬಿಜೆಪಿ ಪಕ್ಷದ ಚಿಹ್ನೆ ಇರುವ ಬ್ಯಾನರ್ ಬಳಸಲಾಗಿದೆ ಎಂದು ಕಾಂಗ್ರೆಸ್ ಜನಪ್ರತಿನಿಧಿಗಳು ವೇದಿಕೆ ಏರಲು ನಿರಾಕರಿಸಿದರು.

ರಾಘವಾಪುರ ಕೆರೆ ಆವರಣದಲ್ಲಿ ಗುರುವಾರ ಸಂಜೆ ನಡೆದ ಸಭಾ ಕಾರ್ಯಕ್ರಮದಲ್ಲಿ ಈ ಘಟನೆ ನಡೆಯಿತು.

ಜಿಲ್ಲಾ ಪಂಚಾಯತಿ ಅಧ್ಯಕ್ಷೆ ಅಶ್ವಿನಿ ವಿಶ್ವನಾಥ್, ಉಪಾಧ್ಯಕ್ಷೆ ಶಶಿಕಲಾ ತಾಲ್ಲೂಕು ಪಂಚಾಯತಿ ಅಧ್ಯಕ್ಷ ಮಧುಶಂಕರ್, ಉಪಾಧ್ಯಕ್ಷೆ ಸುಮಿತ್ರಾ ಮಹೇಶ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಜನಪ್ರತಿನಿಧಿಗಳು ವೇದಿಕೆ ಏರಲು ನಿರಾಕರಿಸಿ ಹೊರಗೆ ನಿಲ್ಲುವುದಾಗಿ ತಿಳಿಸಿದಾಗ ಬ್ಯಾನರ್ ತೆಗೆದರು.

ಜಿಲ್ಲಾ ಉಸ್ತುವಾರಿ ಸಚಿವ ಎಸ್. ಸುರೇಶ್ ಕುಮಾರ್ ಮತ್ತು ಶಾಸಕ ಸಿ.ಎಸ್.ನಿರಂಜನ ಕುಮಾರ್ ಎದುರಲ್ಲೆ ಬ್ಯಾನರ್ ತೆಗೆದರು. ಈ ವಿಷಯದ ಬಗ್ಗೆ ಶಾಸಕರನ್ನು ಸಚಿವರು ಕೇಳಿದರು. ಶಾಸಕರು ಸಚಿವರ ಕಿವಿಯಲ್ಲಿ ಪಿಸುಗುಟ್ಟಿದರು.

ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಧುಂಕರ್ ಮಾತನಾಡಿ, ಸರ್ಕಾರಿ ಕಾರ್ಯಕ್ರಮಕ್ಕೆ ಬಿಜೆಪಿ ಪಕ್ಷದ ಚಿಹ್ನೆ ಇರುವ ಬ್ಯಾನರ್ ಹಾಕಿರುವುದು ಖಂಡನೀಯ ಎಂದು ವಿರೋಧ ವ್ಯಕ್ತಪಡಿಸಿದರು.

By admin