ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿರುವ ಟಿ.ಬಿ.ಜಯಚಂದ್ರ; ಸಚಿವ ಎಸ್ ಟಿ ಎಸ್
ಬೆಂಗಳೂರು: ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರಗಳ ಎರಡೂ ಕಡೆು ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಜಯಭೇರಿ ಭಾರಿಸಲಿದ್ದಾರೆ. ಇದರಲ್ಲಿ ಯಾವುದೇ ಅನುಮಾನ ಬೇಡ. ಈಗಾಗಲೇ ಮತಪೆಟ್ಟಿಗೆ ಬಗ್ಗೆ ಅಪಸ್ವರ ಎತ್ತುವ ಮೂಲಕ ಶಿರಾ ಕಾಂಗ್ರೆಸ್ ಅಭ್ಯರ್ಥಿ ಟಿ.ಬಿ.ಜಯಚಂದ್ರ ಅವರು ಫಲಿತಾಂಶಕ್ಕೆ ಮುನ್ನವೇ ಸೋಲೊಪ್ಪಿಕೊಂಡಿದ್ದಾರೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು.
ರಾಜರಾಜೇಶ್ವರಿ ನಗರದಲ್ಲಿ ಶೇಕಡಾವಾರು ಮತದಾನ ಕಡಿಮೆಯಾದರೂ ಬಿಜೆಪಿ ಗೆಲುವು ನಿಶ್ಚಿತ. ಮುನಿರತ್ನ ಅವರ ಕಾರ್ಯಗಳು ಗೆಲುವು ತಂದುಕೊಡಲಿದೆ ಎಂದು ಸಚಿವರು ಸುದ್ದಿಗಾರರಿಗೆ ತಿಳಿಸಿದರು.
ದಸರಾದಂತೆ ಪಂಚಲಿಂಗ ದರ್ಶನ ಮಹೋತ್ಸವವನ್ನು ಸರಳವಾಗಿ ಮಾಡಬೇಕು ಎಂಬುದು ಸರ್ಕಾರದ ಉದ್ದೇಶ. ಹಾಗಾಗಿ ಸಭೆಯಲ್ಲಿ ಅಧಿಕಾರಿಗಳ ಮಾಹಿತಿ ಪಡೆದು ನಿರ್ಧರಿಸಲಾಗುತ್ತದೆ ಎಂದು ಸಚಿವರು ತಿಳಿಸಿದರು.

By admin