ಚಾಮರಾಜನಗರ: ವಾಯುಸೇನೆಯ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿರುವ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದ ಆಶ್ರಿತಾ ಒಲೆಟಿ ಅವರ ಮನೆಗೆ ಭೇಟಿ ನೀಡಿದ ಸಚಿವ ಸುರೇಶ್ ಕುಮಾರ್, ಅಭಿನಂದಿಸಿ, ಸನ್ಮಾನಿಸಿ, ಗೌರವಿಸಿದ್ದಾರೆ.
ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ದಕ್ಷಿಣ ಬಡವಾವಣೆಯಲ್ಲಿರುವ ಆಶ್ರಿತಾ ಒಲೆಟಿ ನಿವಾಸಕ್ಕೆ ಭೇಟಿ ನೀಡಿದ ಸಚಿವರು ಭಾರತದ ಮೊದಲ ಮಹಿಳಾ ಫ್ಲೈಟ್ ಟೆಸ್ಟ್ ಇಂಜಿನಿಯರ್ ಆಗಿ ಆಯ್ಕೆಯಾಗಿರುವುದು ನಾಡಿಗೆ ಹೆಮ್ಮೆಯ ವಿಚಾರವಾಗಿದೆ. ನಿಮ್ಮ ಸಾಧನೆ ಹೀಗೆಯೇ ಮುಂದುವರೆಯಲಿ. ನಿಮ್ಮಿಂದ ಚಾಮರಾಜನಗರ ಜಿಲ್ಲೆಗೆ ಮುಂದಿನ ದಿನಗಳಲ್ಲಿ ಮತ್ತಷ್ಟು ಕೀರ್ತಿ ಸಿಗಲಿ ಎಂದು ಹಾರೈಸಿದ್ದಾರೆ.
ಈ ವೇಳೆ ಶಾಸಕ ಎನ್.ಮಹೇಶ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಅಪರ ಪೊಲೀಸ್ ವರಿಷ್ಠಾಧಿಕಾರಿ ಅನಿತಾ ಹದ್ದಣ್ಣನವರ್ ಇದ್ದರು.