ಸ್ಥಳೀಯ ಚುನಾವಣೆಗಳಲ್ಲಿ ಇವಿಎಂ ಬಳಕೆ ಕೈಬಿಟ್ಟು ಬ್ಯಾಲೆಟ್ ಮೂಲಕ ಚುನಾವಣೆ ನಡೆಸಲು ಚುನಾವಣಾ ಆಯೋಗ ಚಿಂತನೆ ನಡೆಸಬೇಕು ಎಂದು ಕಾಂಗ್ರೆಸ್ ಯುವ ಮುಖಂಡ ಎನ್ ಎಂ ನವೀನ್ ಕುಮಾರ್ ಚುನಾವಣಾ ಆಯೋಗಕ್ಕೆ ಒತ್ತಾಯ ಮಾಡಿದ್ದಾರೆ.
ಈ ಕುರಿತು ಚುನಾವಣಾ ಆಯೋಗಕ್ಕೆ ಪತ್ರ ಬರೆದಿರುವ ಅವರು, ಈಚೆಗೆ ನಡೆದಿರುವ ಚುನಾವಣೆಗಳಲ್ಲಿ ಇವಿಎಂ ಯಂತ್ರಗಳ ಮೂಲಕ ನಡೆಸಿರುವ ಚುನಾವಣೆ ಮತ ಎಣಿಕೆ ಕಾರ್ಯದಲ್ಲಿ ಮತಗಟ್ಟೆಗಳಲ್ಲಿ ಮತದಾನವಾಗಿರುವ ಮತಗಳಿಗಿಂತ ಹೆಚ್ಚಿನ ಮತಗಳು ಚಲಾವಣೆಯಾಗುತ್ತಿರುವುದು ಕಂಡು ಬರುತ್ತಿದ್ದು ಪಾರದರ್ಶಕವಾದ ಚುನಾವಣೆಗಳು ನಡೆಯುತ್ತಿರುವುದು ಅನುಮಾನಕ್ಕೆ ಕಾರಣವಾಗಿದೆ.
ಈಗಾಗಲೇ ಇಂಗ್ಲೆಂಡ್ , ಜರ್ಮನಿ, ನೆದರ್ಲೆಂಡ್ಸ್, ಫ್ರಾನ್ಸ್, ಇಟಲಿ ,ಸೇರಿದಂತೆ ಅನೇಕ ದೇಶಗಳಲ್ಲೂ ಇವಿಎಂ ಬಗ್ಗೆ ಅನುಮಾನವಿದ್ದು ಹಾಗಾಗಿ ಅಲ್ಲೂ ಈಗಲೂ ಕೂಡ ಬ್ಯಾಲೆಟ್ ಪೇಪರ್ ಉಪಯೋಗಿಸುತ್ತಿರುವುದು, ಚುನಾವಣಾ ಆಯೋಗ ಅದರ ಹಾಗೆ ಭಾರತದಲ್ಲೂ ಸಹ ಹಿಂದೆ ಇದ್ದಂತಹ ಬ್ಯಾಲೆಟ್ ಪೇಪರ್ ತರಬೇಕೆು,
ಈ ಬಗ್ಗೆ ಚುನಾವಣಾ ಆಯೋಗದಿಂದಲೂ ಉತ್ತರ ಸಿಗುತ್ತಿಲ್ಲ. ಕೇಂದ್ರ ಸರ್ಕಾರವೂ ನಿಖರವಾದ ಉತ್ತರ ನೀಡುತ್ತಿಲ್ಲ. ಇದರಿಂದ ಚುನಾವಣೆ ಪಾರದರ್ಶಕವಾಗಿ ನಡೆಯುತ್ತಿರುವುದು ಅನುಮಾನ ಮೂಡಿಸುವಂತಿದ್ದು, ಮುಂಬರುವ ಗ್ರಾಮ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಹಾಗೂ ಪುರಸಭೆ, ನಗರಸಭೆ, ವಿಧಾನಸಭಾ ಚುನಾವಣೆಗಳಲ್ಲಿ ಇವಿಎಂ ಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ ಪ್ರಕ್ರಿಯೆ ನಡೆಸಬೇಕು. ಈಗಾಗಲೇ ಸಾಕಷ್ಟು ರಾಜಕೀಯ ಪಕ್ಷಗಳು ಈ ಬಗ್ಗೆ ಚುನಾವಣೆ ಆಯೋಗಕ್ಕೆ ಮನವಿ ಮಾಡಿದ್ದಾರೆ ಎಂದರು.