ಮಂಡ್ಯ: ರಾಜ್ಯ ಕೋವಿಡ್ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ ಅವರು ಮಂಡ್ಯ ಜಿಲ್ಲೆಯಲ್ಲಿ ಕೋವಿಡ್ ವ್ಯವಸ್ಥೆ ವೀಕ್ಷಿಸಲು ಬಿರುಸಿನ ಪ್ರವಾಸ ನಡೆಸಿದರಲ್ಲದೆ ಮದ್ದೂರು, ಬೂದನೂರು ಹಾಗೂ ಮಂಡ್ಯ ಆಸ್ಪತ್ರೆಗಳಿಗೆ ಭೇಟಿ ವ್ಯಾಪಕ ಪರಿಶೀಲನೆ ನಡೆಸಿದರು.
ಮಂಡ್ಯದ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಪಿಪಿಇ ಕಿಟ್ ಧರಿಸಿ ಕೋವಿಡ್ ಸೋಂಕಿತರ ವಾರ್ಡ್‌ಗೆ ತೆರಳಿ ಖುದ್ದು ಪರಿಶೀಲನೆ ನಡೆಸಿದರಲ್ಲದೆ, ಸೋಂಕಿತರ ಯೋಗ ಕ್ಷೇಮ ವಿಚಾರಿಸಿ ಅವರಿಗೆ ಸಿಗುತ್ತಿರುವ ಚಿಕಿತ್ಸೆ-ಆರೈಕೆಯ ಮಾಹಿತಿ ಪಡೆದುಕೊಂಡರು.


ವಾರ್ಡ್‌ನಲ್ಲಿ ಆಮ್ಲಜನಕದ ವ್ಯವಸ್ಥೆ, ಚಿಕಿತ್ಸೆ ವಿಧಾನ, ಮೂಲಸೌಕರ್ಯ ಮುಂತಾದವುಗಳನ್ನು ವೀಕ್ಷಿಸಿದರು. ವಾರ್ಡ್‌ನಲ್ಲಿ ಸೋಂಕಿತರ ಅಟೆಂಡರ್‌ಗಳು ಇದ್ದಿದ್ದನ್ನು ಕಂಡು ಆಕ್ಷೇಪ ವ್ಯಕ್ತಪಡಿಸಿದ ಡಿಸಿಎಂ, ಯಾವುದೇ ಕಾರಣಕ್ಕೂ ಸೋಂಕಿತರಲ್ಲದವರನ್ನು ವಾರ್ಡ್‌ಗೆ ಬಿಟ್ಟುಕೊಳ್ಳಬಾರದು ಎಂದು ಜಿಲ್ಲಾ ವೈದಾಧಿಕಾರಿಗೆ ತಾಕೀತು ಮಾಡಿದರು.


ಜತೆಗೆ, ಸೋಂಕಿತರ ಕೇಸ್ ಶೀಟ್‌ಗಳನ್ನೂ ಗಮನಿಸಿದರಲ್ಲದೆ ಅವರಿಗೆ ಸಿಗುತ್ತಿರುವ ಔ?ಧೋಪಚಾರದ ಬಗ್ಗೆಯೂ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಸೋಂಕಿತರನ್ನು ಮಾತನಾಡಿಸಿದ ಅವರು, “ಧೈರ್ಯದಿಂದ ಇರಿ, ಬೇಗ ಗುಣಮುಖರಾಗುತ್ತೀರಿ. ವೈದ್ಯರು ಹೇಳಿದಂತೆ ಕೇಳಿ” ಎಂದು ಸ್ಥೈರ್ಯ ತುಂಬಿದರು.
ಮದ್ದೂರಿನಿಂದ ತಮ್ಮ ಪ್ರವಾಸವನ್ನು ಆರಂಭಿಸಿದ ಡಿಸಿಎಂ ಅವರು, ಇನ್ನೂ ಆಸ್ಪತ್ರೆಗೆ ಬರುತ್ತಿದ್ದಂತೆಯೇ, ಆಸ್ಪತ್ರೆಯೊಳಗೆ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರು ಕಿಟಕಿಗಳ ಮೂಲಕವೇ ಕಾಣಿಸಿಕೊಂಡು ಡಿಸಿಎಂಗೆ ಅಭಿವಂದನೆ ಸಲ್ಲಿಸಿದರು. “ನಮಸ್ಕಾರ ಅಶ್ವತ್ಥನಾರಾಯಣ್ ಸರ್” ಎಂದು ಕೂಗಿದರು. ಈ ವೇಳೆ ಕೊಂಚ ಹತ್ತಿರಕ್ಕೆ ಹೋದ ಡಿಸಿಎಂ, “ಎಲ್ಲರೂ ಕ್ಷೇಮವಾಗಿದ್ದೀರಾ? ಒಳ್ಳೆಯ ಚಿಕಿತ್ಸೆ, ಆಹಾರ, ಆರೈಕೆ ಸಿಗುತ್ತಿದೆಯಾ?” ಎಂದು ಆಪ್ತವಾಗಿ ವಿಚಾರಿಸಿದರು. ಬಳಿಕ ಬೂದನೂರು ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೂ ಡಿಸಿಎಂ ಭೇಟಿ ಪರಿಶೀಲನೆ ನಡೆಸಿದರು. ಅಲ್ಲಿ ಸಿಬ್ಬಂದಿ ಕೊರತೆ ಇರುವುದನ್ನು ಕಂಡ ಡಿಸಿಎಂ ಅವರು, ಕೂಡಲೇ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿ ಅಗತ್ಯ ಇರುವ ಎಲ್ಲ ಸಿಬ್ಬಂದಿಯನ್ನೂ ತಕ್ಷಣವೇ ನೇಮಕ ಮಾಡಿಕೊಳ್ಳಿ ಎಂದು ಜಿಲ್ಲಾಧಿಕಾರಿ ಅಶ್ವಥಿ ಅವರಿಗೆ ಸೂಚನೆ ಕೊಟ್ಟರು.


ಜಿಲ್ಲೆಯಲ್ಲಿ ಈಗ ನಾಲ್ಕು ಕೋವಿಡ್ ಕೇರ್ ಸೆಂಟರ್‌ಗಳಿದ್ದು, ಅವುಗಳನ್ನು ಇನ್ನೂ ಹೆಚ್ಚಿಸಲಾಗುವುದು. ಮುಖ್ಯವಾಗಿ ಗ್ರಾಮೀಣ ಪ್ರದೇಶ ಹಾಗೂ ಮಂಡ್ಯದ ಕೊಳೆಗೇರಿಗಳಲ್ಲಿ ಪತ್ತೆಯಾಗುವ ಸೋಂಕಿತರಿಗೆ ಹೋಮ್ ಐಸೋಲೇ?ನ್ ಇರುವುದಿಲ್ಲ. ಅವರೆಲ್ಲರನ್ನೂ ಕೋವಿಡ್ ಕೇರ್‌ಗಳಿಗೆ ಶಿಫ್ಟ್ ಮಾಡಿ ಚಿಕಿತ್ಸೆ ನೀಡಲಾಗುವುದು ಎಂದರಲ್ಲದೆ, ಈ ಬಗ್ಗೆ ಜಿಲ್ಲಾಡಳಿತಕ್ಕೆ ಸ್ಪ? ನಿರ್ದೇಶನ ಕೊಡಲಾಗಿದೆ ಎಂದರು.
2021ರ ಕೊನೆ ವೇಳೆಗೆ ರಾಜ್ಯದ ಪ್ರತಿ ನಾಗರಿಕರಿಗೂ ಲಸಿಕೆ ಸಿಗುವ ನಿಟ್ಟಿನಲ್ಲಿ ಸರಕಾರ ಎಲ್ಲ ಕ್ರಮ ವಹಿಸಿದೆ. ೪೫ ವ?ಕ್ಕೂ ಮೇಲ್ಪಟ್ಟ ಎಲ್ಲರಿಗೂ ಸೆಕೆಂಡ್ ಡೋಸ್ ಕೊಡಲಾಗುತ್ತಿದೆ. ಇದರಲ್ಲಿ ಯಾವುದೇ ಸಮಸ್ಯೆ ಇಲ್ಲ. ಅವರಿಗೆ ಲಸಿಕೆ ಕೊರತೆ ಉಂಟಾಗಂತೆ ಎಚ್ಚರ ವಹಿಸಲಾಗಿದೆ. ಜತೆಗೆ, ಮೂಂಚೂಣಿಯಲ್ಲಿ ನಿಂತು ಕೆಲಸ ಮಾಡುತ್ತಿರುವ ಯಾರಿಗೂ ಕೊರತೆ ಆಗುತ್ತಿಲ್ಲ. ಲಸಿಕೆ ಉತ್ಪಾದನೆಯನ್ನು ತಿಂಗಳಿಂದ ತಿಂಗಳಿಗೆ ಹೆಚ್ಚಿಸಲಾಗುತ್ತಿದೆ ಎಂದು ಡಿಸಿಎಂ ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.
ಮುಖ್ಯಮಂತ್ರಿಗಳು ಘೋ?ಣೆ ಮಾಡಿರುವ 1250 ಕೋಟಿ ರೂ. ಪ್ಯಾಕೇಜ್ ಬಗ್ಗೆ ಅಪಸ್ವರ ಎತ್ತುವುದು ಸರಿಯಲ್ಲ. ಎಲ್ಲ ವರ್ಗದವರನ್ನು ಒಳಗೊಂಡಂತೆ ಪ್ಯಾಕೇಜ್ ರೂಪಿಸಲಾಗಿದೆ. ಯಾರಾದರೂ ತಪ್ಪಿ ಹೋಗಿದ್ದರೆ ಅವರನ್ನೂ ಸೇರಿಸಲು ಪ್ರಯತ್ನಿಸಲಾಗುವುದು ಎಂದು ಡಿಸಿಎಂ ಹೇಳಿದರು.

By admin