ಚಾಮರಾಜನಗರದ ರಕ್ಷಿತಾಮಹಲ್ ಸಭಾಂಗಣದಲ್ಲಿ ಜಿಲ್ಲಾ ಉಪ್ಪಾರ ಯುವಕರ ಸಂಘದ ವತಿಯಿಂದ ಪ್ರಸಕ್ತ ಸಾಲಿನ ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ ೮೫ ಕ್ಕಿಂತ ಹೆಚ್ಚು ಅಂಕಗಳಿಸಿದ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.

ಚಾಮರಾಜನಗರಅ.೨೩: ಯಾವುದೇ ಸಮುದಾಯಗಳು ಸರ್ವತೋಮುಖವಾಗಿ ಅಭಿವೃದ್ದಿ ಹೊಂದಬೇಕಾದರೆ ಶಿಕ್ಷಣ ಪ್ರಮುಖ ಅಸ್ತ್ರವಾಗಿದೆ ಎಂದು ಪಾಲಿಟೆಕ್ನಿಕ್ ಕಾಲೇಜಿನ ಪ್ರಾಂಶುಪಾಲ ಮಾದೇಶ್ ಅಭಿಪ್ರಾಯಪಟ್ಟರು.
ಅವರು ನಗರದ ರಕ್ಷಿತಾಮಹಲ್ ಸಭಾಂಗಣದಲ್ಲಿ ಜಿಲ್ಲಾ ಉಪ್ಪಾರ ಯುವಕರ ಸಂಘದ ವತಿಯಿಂದ ೨೦೨-೨೨ನೇ ಸಾಲಿನ ಎಸ್‌ಎಸ್‌ಎಲ್‌ಸಿ, ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ೮೫ ಕ್ಕಿಂತ ಹೆಚ್ಚು ಅಂಕಗಳಿಸಿದ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಪ್ರತಿಭಾಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಪ್ರತಿಯೊಬ್ಬ ವಿದ್ಯಾರ್ಥಿಗಳು ವಿದ್ಯಾವಂತರಾದಾಗ ಮಾತ್ರ ಸಮಾಜದ ಅಭಿವೃದ್ದಿ ಸಾಧ್ಯವಾಗುತ್ತದೆ.ಈ ಹಿನ್ನಲೆಯಲ್ಲಿ ವಿದ್ಯಾರ್ಥಿಗಳು ಶ್ರಮವಹಿಸಿ ವಿದ್ಯೆಭ್ಯಾಸ ಮಾಡಿ ಜ್ಜಾಮವಂತರಾಗಬೇಕು,ಸಮಯಪ್ರಜ್ಜೆ,ನಿಷ್ಠೆಗಳಂತಹ ಗುಣ ಬೆಳೆಸಿಕೊಂಡು ಓದಿದ ಶಾಲೆಗೆ ಹಾಗೂ ಪೋಷಕರಿಗೆ ಉತ್ತಮ ಹೆಸರು ತಂದುಕೊಡುವ ಪ್ರಜೆಗಳಾಗಿ ರೂಪುಗೊಳ್ಳಬೇಕೆಂದು ಸಲಹೆ ನೀಡಿದರು.
ನಗರದ ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸೋಮಣ್ಣ ಅವರು ಮಾತನಾಡಿ ಇಂದು ಶಿಕ್ಷಣ ಪಡೆಯುವುದೇ ಉದ್ಯೋಗಕ್ಕಾಗಿ ಎಂಬ ಮನೋಭಾವನೆ ಪ್ರತಿಯೊಬ್ಬರಲ್ಲೂ ಇದೆ, ಅದು ಸರಿಯಾದ ಬೆಳವಣಿಗೆಯಲ್ಲ. ಶಿಕ್ಷಣ ಜ್ಞಾನಾರ್ಜನೆಕ್ಕಾಗಿಯೇ ಹೊರತೂ ಉದ್ಯೋಗಹಿಡಿಯುವುದಲ್ಲ. ಶಿಕ್ಷಣದಿಂದ ಪ್ರತಿಭಾವಂತರಾಗುವುದರ ಜತೆಗೆ ಉತ್ತಮ ಸಮಾಜ ನಿರ್ಮಿಸಲು ಸಾಧ್ಯವಿದೆ ಎಂದರು.
ಪೋಷಕರು ತಮ್ಮ ಮಕ್ಕಳ ವಿದ್ಯೆಭ್ಯಾಸದ ಕಡೆಗೆ ಹೆಚ್ಚಿನ ಕಾಳಜಿ ವಹಿಸಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಶಿಕ್ಷಣದ ಮೂಲ ಉದ್ದೇಶ ಈಡೇರಿಸಲು ಮುಂದಾಗಬೇಕೆಂದು ಸಲಹೆ ನೀಡಿದರು.
ವಿದ್ಯಾರ್ಥಿಗಳ ಪ್ರತಿಭೆಗೆ ನೀರೆರೆಯುವ ಇಂತಹ ಕಾರ್ಯಕ್ರಮಗಳ ಸದ್ಭಳಕೆಗೆ ಸಮುದಾಯದ ವಿದ್ಯಾರ್ಥಿಗಳು, ಪೋಷಕರು ಮುಂದಾಗಬೇಕು ಎಂದರು.
ಚಾಮರಾಜನಗರ ಹಿಂದುಳಿದ ಜಿಲ್ಲೆ ಎನ್ನುವುದು ಸರಿಯಲ್ಲ.ಇಲ್ಲಿನ ವಿದ್ಯಾರ್ಥಿಗಳು ಶೇ.೯೦ಕ್ಕಿಂತ ಹೆಚ್ಚಿನ ಅಂಕಗಳನ್ನು ಪಡೆದು ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಅವರ ಪ್ರತಿಭೆಯನ್ನು ಹೊರತಂದು ಮತ್ತಷ್ಟು ಪ್ರೋತ್ಸಾಹಿಸುವ ಕೆಲಸ ಸಂಘಸಂಸ್ಥೆಗಳಿಂದ ನಡೆಯಬೇಕಿದೆ ಎಂದರು.
ವಾಣಿಜ್ಯ ತೆರಿಗೆ ಅಧಿಕಾರಿ ಬಸವಣ್ಣ, ಮಾತನಾಡಿ, ಆಧುನೀಕತೆಯ ಭರಾಟೆಯಲ್ಲಿ ವಿದ್ಯಾರ್ಥಿಗಳು ಪುಸ್ತಕ ಓದುವುದನ್ನೇ ಮರೆತುಬಿಟ್ಟಿದ್ದಾರೆ, ಮೊಬೈಲ್ ಅನ್ನು ಪಕ್ಕಕ್ಕಿಟ್ಟು ಓದುವ ಅಭಿರುಚಿ ಬೆಳೆಸಿಕೊಳ್ಳಬೇಕು ಎಂದು ಸಲಹೆ ನೀಡಿದರು. ಪೋಷಕರು ಹೆಣ್ಣು ಮಕ್ಕಳನ್ನು ಅರ್ಧಕ್ಕೆ ಶಾಲೆಯನ್ನು ಬಿಡಿಸದೆ ಶಿಕ್ಷಣವನ್ನು ಪೂರ್ಣಗೊಳಿಸುವಂತೆ ಸಹಕಾರ ನೀಡಬೇಕೆಂದರು.
ಉಪ್ಪಾರ ಸಮುದಾಯವು ದುಶ್ಛಟಗಳಿಂದ ದೂರವಿದ್ದು ಹಣವನ್ನು ಪರಿಮಿತವಾಗಿ ಬಳಸಿ ಮಿತವ್ಯ ಸಾಧಿಸಿ ಉತ್ತಮ ಜೀವನ ನಡೆಸಬೇಕೆಂದು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ಅತ್ಯುನ್ನತ ಸ್ಥಾನಗಳಿಸಿರುವ ೯ ಮಂದಿ ವಿದ್ಯಾರ್ಥಿಗಳಿಗೆ ಪ್ರಥಮ-೫ ಸಾವಿರ, ದ್ವಿತೀಯ-೩ ಸಾವಿರ ತೃತೀಯಬಹುಮಾನ ೨ ಸಾವಿರ ರೂ.ನೀಡಿ ಪುರಸ್ಕರಿಸಲಾಯಿತು. ಇವರ ಜತೆ ೧೦೦ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದನ ಪತ್ರ ನೀಡಿ ಸನ್ಮಾನಿಸಲಾಯಿತು.
ಸರಕಾರಿ ಐಟಿಐ ಕಾಲೇಜಿನ ಪ್ರಾಂಶುಪಾಲ ರಂಗಸ್ವಾಮಿ, ಉಪನ್ಯಾಸಕ ಗೋವಿಂದರಾಜು ಬಾಲಕಾರ್ಮಿಕ ಯೋಜನಾ ಸೊಸೈಟಿ ನಿರ್ದೇಶಕ ಮಹೇಶ್, ಬಾಗಳಿ ಮಹದೇವಸ್ವಾಮಿ, ಇನ್ಸ್ ಪೆಕ್ಟರ್ ಮಹದೇವಶೆಟ್ಟಿ ಅಧ್ಯಕ್ಷತೆ ವಹಿಸಿದರು , ಆಹಾರ ಮತ್ತು ಸರಬರಾಜು ಇಲಾಖೆಯ ಅಧಿಕಾರಿ ಲಕ್ಷ್ಮಿ, ನಗರಾಭಿವೃದ್ದಿ ಕೇಂದ್ರದ ಶೀಲಾರಾಣಿ, ಪತ್ರ ಕರ್ತ ಗೌಡಹಳ್ಳಿ ಮಹೇಶ್ ಚಾಮರಾಜನಗರ ತಾಲೂಕು ಉಪ್ಪಾರ ನೌಕರರ ಸಂಘದ ಅಧ್ಯಕ್ಷ ಸೋಮಣ್ಣ,ಯಳಂದೂರು ಧ್ಯಕ್ಷ ರೇಚಣ್ಣ, ನಗರಸಭೆ ಸದಸ್ಯ ಅಧಿಕಾರಿ ಬಸವಣ್ಣ,ಜೀ ಕನ್ನಡ ವಾಹಿನಿಯಲ್ಲಿ ಪಪ್ರಶಸ್ತಿ ಪಡೆದ ಗೌತಮ್ ಜಿಲ್ಲಾ ಉಪ್ಪಾರ ಯುವಕರ ಸಂಘದ ಅಧ್ಯಕ್ಷ ಜಯಕುಮಾರ್, ಕಾರ್ಯದರ್ಶಿ ಸಿ.ಎಸ್.ನಾಗರಾಜು, ಉಪಾಧ್ಯಕ್ಷ ಬಿ.ಸ್ವಾಮಿ, ಶಿವಕುಮಾರ್,ಮಹದೇವಸ್ವಾಮಿ, ಕಾಗಲವಾಡಿ ಮೋಳೆ ಮರಿಸ್ವಾಮಿ, ಶ್ರೀನಿವಾಸ್, ರಂಗಸ್ವಾಮಿ ಸಂಪತ್ತು ಸೇರಿದಂತೆ ಜಿಲ್ಲೆಯ ನಾನಾ ಕಡೆಯಿಂದ ಆಗಮಿಸಿದ್ದ ಪೋಷಕರು, ವಿದ್ಯಾರ್ಥಿಗಳು ಹಾಜರಿದ್ದರು.