ಮೈಸೂರು: ಗಲಾಟೆ ಮಾಡಿದನೆಂದು ರೊಚ್ಚಿಗೆದ್ದ ಪತ್ನಿಯೊಬ್ಬಳು ತನ್ನ ಪತಿಯ ಮರ್ಮಾಂಗಕ್ಕೇ ಹೊಡೆದು ಕೊಲೆಗೈದ ವಿಲಕ್ಷಣ ಘಟನೆಯೊಂದು ಮೈಸೂರಿನಲ್ಲಿ ನಡೆದಿದೆ.
ಈ ಘಟನೆ ಸರಗೂರು ತಾಲೂಕಿನ ಮುಳ್ಳೂರು ಗ್ರಾಮದಲ್ಲಿ ನಡೆದಿದೆ. ಬಸವರಾಜಪ್ಪ (೪೨) ಕೊಲೆಯಾದ ವ್ಯಕ್ತಿಯಾಗಿದ್ದು, ಈತನನ್ನು ಪತ್ನಿ ನೇತ್ರಾವತಿ ಕೊಲೆ ಮಾಡಿದ್ದಾಳೆ.
ರಾತ್ರಿ ಕಂಠ ಪೂರ್ತಿ ಮದ್ಯ ಸೇವಿಸಿ ಬಂದ ಬಸವರಾಜಪ್ಪ ಪತ್ನಿ ನೇತ್ರಾವತಿ ಜೊತೆ ಗಲಾಟೆ ಮಾಡಿದ್ದನು. ಈ ವೇಳೆ ಕೋಪಗೊಂಡ ಪತ್ನಿ ಬಸವರಾಜಪ್ಪನ ಮರ್ಮಾಂಗಕ್ಕೆ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾಳೆ. ಪರಿಣಾಮ ತೀವ್ರ ರಕ್ತಸ್ರಾವದಿಂದ ಬಸವರಾಜಪ್ಪ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ.