ಗುಂಡ್ಲುಪೇಟೆ: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಶಾಸಕ ಸಿ.ಎಸ್. ನಿರಂಜನಕುಮಾರ್ ಗುದ್ದಲಿಪೂಜೆ ನೆರವೇರಿದರು.
ಹಿರಿಕಾಟಿ ಗ್ರಾಮದಲ್ಲಿ ಪರಿಶಿಷ್ಟ ಜಾತಿ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಗುದ್ದಲಿ ಪೂಜೆ, ಅರೇಪುರ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ, ಚನ್ನವಡೆಯನಪುರ ಗ್ರಾಮದ ಸಿಸಿ ರಸ್ತೆ ಮತ್ತು ಚರಂಡಿ, ಹೊಣಕನಪುರ ಗ್ರಾಮದಲ್ಲಿ ಪರಿಶಿಷ್ಟ ಪಂಗಡ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಗುದ್ದಲಿ ಪೂಜೆ, ಮಲ್ಲಯ್ಯನಪುರ ಗ್ರಾಮದಲ್ಲಿ ರಸ್ತೆ, ಬೇರಂಬಾಡಿ ಗ್ರಾಮದಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ, ದೇವರಹಳ್ಳಿಯಿಂದ ಕಳೀಪುರ ರಸ್ತೆ ಗುದ್ದಲಿ ಪೂಜೆ ಮತ್ತು ದೇವರಹಳ್ಳಿಯಲ್ಲಿ ಪರಿಶಿಷ್ಟ ಪಂಗಡ ಬೀದಿಯಲ್ಲಿ ಸಿಸಿ ರಸ್ತೆ ಮತ್ತು ಚರಂಡಿ ಗುದ್ದಲಿಪೂಜೆ ನೆರವೇರಿಸಿದರು.
ಹಂಗಳ ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ಘಟಕದ ಉದ್ಘಾಟನೆ, ಕಸದ ಬುಟ್ಟಿ ವಿತರಣೆ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಡಿಜಿಟಲ್ ಬೋರ್ಡ್ ಅನಾವರಣ, ಆದಿ ಜಾಂಬವರ ಬೀದಿಯಲ್ಲಿ ದೇವಸ್ಥಾನದ ಕಾಂಪೌಂಡ್ ಗುದ್ದಲಿ ಪೂಜೆ, ಮೇಲುಕಾಮನಹಳ್ಳಿ ಗ್ರಾಮದಲ್ಲಿ ಸಿ.ಸಿ. ರಸ್ತೆ ಮತ್ತು ಜೇನುಕುರುಬರ ಮನೆಗಳ ಗುದ್ದಲಿ ಪೂಜೆ, ಮಗುವಿನಹಳ್ಳಿ ಗ್ರಾಮದಲ್ಲಿ ಜೇನುಕುರುಬರ ಮನೆಗಳ ಗುದ್ದಲಿ ಪೂಜೆ, ಮಂಗಲ ಗ್ರಾಮದಲ್ಲಿ ಸಿ.ಸಿ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಶಾಸಕ ಸಿ.ಎಸ್. ನಿರಂಜನಕುಮಾರ್, ಈಗಾಗಲೇ ತಾಲ್ಲೂಕಿನ ಹಲವು ಗ್ರಾಮಗಳ ಪರಿಶಿಷ್ಟ ಜಾತಿ, ವರ್ಗದ ಬೀದಿಗಳನ್ನು ಕಾಂಕ್ರಿಟೀಕರಣ ಗೊಳಿಸಲಾಗಿದ್ದು, ಉಳಿದಿರುವುದನ್ನು ಹಂತ ಹಂತವಾಗಿ ಅನುದಾನ ನೀಡಿ ನೆರವೇರಿಸಲಾಗುವುದು. ತಾವು ಶಾಸಕರಾದ ನಂತರ ಹಲವು ಗ್ರಾಮಗಳಿಗೆ ಭೇಟಿ ನೀಡಿ ಸಮಸ್ಯೆಗಳನ್ನು ಪಟ್ಟಿ ಮಾಡಲಾಗಿದ್ದು, ಸಾರ್ವಜನಿಕರ ಕೋರಿಕೆಯ ಮೇರೆಗೂ ಹಲವು ಕೆಲಸಗಳನ್ನು ಮಾಡಲಾಗಿದೆ ಎಂದರು.
ಹಿಂದಿನ ಸರ್ಕಾರ ರಸ್ತೆ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ವಹಿಸಿತ್ತು. ಇದರಿಂದ ತಾಲ್ಲೂಕಿನ ಹಲವು ರಸ್ತೆಗಳು ಗುಂಡಿಬಿದ್ದು ಹಾಳಾಗಿದ್ದವು. ಈಗ ಅವುಗಳಿಗೆ ಅನುದಾನ ನೀಡಿ ರಸ್ತೆ ಅಭಿವೃದ್ಧಿ ಪಡಿಲಾಗುತ್ತಿದ್ದು, ಇದಕ್ಕೆ ಸಾರ್ವಜನಿಕರ ಸಹಕಾರವೂ ಅಗತ್ಯ. ತಾಲ್ಲೂಕಿನ ಹಲವು ಗ್ರಾಮಗಳಲ್ಲಿ ಅಂಬೇಡ್ಕರ್ ಭವನ ನಿರ್ಮಾಣವಾಗದಿರುವ ಹಿನ್ನೆಲೆಯಲ್ಲಿ ಅವುಗಳನ್ನು ಪಟ್ಟಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಅವುಗಳನ್ನು ಮಂಜೂರು ಮಾಡಲಾಗುವುದು ಎಂದರು.
ಈ ವೇಳೆ ಬಿಜೆಪಿ ಮಂಡಲ ಅಧ್ಯಕ್ಷ ದೊಡ್ಡಹುಂಡಿ ಜಗದೀಶ್, ಪುರಸಭಾ ಅಧ್ಯಕ್ಷ ಪಿ. ಗಿರೀಶ್, ಅಕ್ಕ ಮಹದೇವಪ್ರದಾಸ್, ಶ್ರೀಕಂಠಪ್ಪ, ಬಿಜೆಪಿ ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪ್ರಣಯ್ ಸೇರಿದಂತೆ ಇತರರು ಹಾಜರಿದ್ದರು.
ವರದಿ: ಬಸವರಾಜು ಎಸ್ ಹಂಗಳ