ಚಾಮರಾಜನಗರ: ತಾಲೂಕಿನ ಮಲ್ಲಯ್ಯನಪುರ, ತಮ್ಮಡಹಳ್ಳಿ, ಗ್ರಾಮದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ಚರಂಡಿ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೂಮಿಪೂಜೆ ನೆರವೇರಿಸಿದರು.
ನಂತರ ಮಾತನಾಡಿ, ಟಿಎಸ್‌ಪಿ ಯೋಜನೆಯಡಿಯಲ್ಲಿ ತಮ್ಮಡಹಳ್ಳಿ ಗ್ರಾಮದ ಪರಿಶಿಷ್ಟ ಪಂಗಡದವರ ಬೀದಿಯಲ್ಲಿ ೨೦ ಲಕ್ಷ ರೂ. ಎಸ್ಸಿಪಿ ಯೋಜನೆಯಡಿ ಪರಿಶಿಷ್ಟ ಜಾತಿ ಸಮುದಾಯದ ಬೀದಿಯಲ್ಲಿ ೧೫ ಲಕ್ಷ ರೂ. ಮಲ್ಲಯ್ಯನಪುರ ಗ್ರಾಮದಲ್ಲಿನ ಪರಿಶಿಷ್ಟ ಜಾತಿಬೀದಿಗೆ ೨೦ ಲಕ್ಷ ರೂ.ವೆಚ್ಚದಲ್ಲಿ ಸಿಮೆಂಟ್ ಕಾಂಕ್ರಿಟ್ ರಸ್ತೆ ಹಾಗೂ ಚರಂಡಿ ನಿರ್ಮಾಣಕ್ಕೆ ಗುದ್ದಲಿಪೂಜೆ ನೆರವೇರಿಸಲಾಗಿದೆ.
ತಮ್ಮ ಕೇತ್ರವ್ಯಾಪ್ತಿಯಲ್ಲಿ ಜನತೆಯ ಆಶಯಕ್ಕೆ ಬದ್ದರಾಗಿ ಗ್ರಾಮಗಳಲ್ಲಿ ರಸ್ತೆ ಚರಂಡಿ, ಸಮುದಾಯ ಭವನ ಆಶ್ರಯಮನೆ ಗಂಗಾ ಕಲ್ಯಾಣ ಯೋಜನೆ ಸೇರಿದಂತೆ ಸರಕಾರ ಮಂಜೂರುಮಾಡುವ ಅನುದಾನ ಹಾಗೂ ಸೌಲಭ್ಯಗಳನ್ನು ಜನರಿಗೆ ಪ್ರಾಮಾಣಿಕವಾಗಿ ತಲುಪಿಸುವ ಕೆಲಸ ಮಾಡಲಾಗುತ್ತಿದೆ, ಕಾಮಗಾರಿ ನಿರ್ವಹಣೆ ಗುತ್ತಿಗೆದಾರರು ಗುಣಮಟ್ಟದ ಕಾಮಗಾರಿಗೆ ಒತ್ತು ನೀಡಬೇಕು ಎಂದರು.
ಕನಿಷ್ಠ ವೇತನ ಸಲಹಾಮಂಡಳಿ ಮಾಜಿ ಅಧ್ಯಕ್ಷ ಉಮೇಶ್, ಶಿವಪುರ ಗ್ರಾಮಪಂಚಾಯಿತಿ ಅಧ್ಯಕ್ಷರಾದ ಮಹದೇವಮ್ಮ, ಉಪಾಧ್ಯಕ್ಷ ಕುಮಾರಸ್ವಾಮಿ, ಸದಸ್ಯರಾದ ಶಿವಣ್ಣ, ಶಿವಕುಮಾರ್, ತಮ್ಮಡಹಳ್ಳಿ ಗ್ರಾಪಂ ಅಧ್ಯಕ್ಷೆ ಮೇಘಶ್ರೀ, ಗ್ರಾಪಂ ಸದಸ್ಯರು, ಮುಖಂಡರಾದ ಸಿದ್ದರಾಜನಾಯಕ, ಉಡಿಗಾಲನಂಜಪ್ಪ, ಮಹದೇವಸ್ವಾಮಿ, ಕುಮಾರ್, ಎಇಇ ಕೆಂಪರಾಜು, ಎಂಜಿನಿಯರ್ ಮಧುಸೂಧನ್, ಶಾಂತಮ್ಮ ಗ್ರಾಮಸ್ಥರು, ಮುಖಂಡರು ಹಾಜರಿದ್ದರು.