ಚಿತ್ರದುರ್ಗ : ಶ್ರೀರಂಗಾಪುರ ಬಳಿಸೋಮವಾರ ಬೆಳ್ಳಂಬೆಳಗ್ಗೆ ಚಾಲಕನನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇಕುಟುಂಬದ ಮೂವರು ಮೃತಪಟ್ಟಿದ್ದರು.ಇಂದು ಬೆಳ್ಳಂಬೆಳಗ್ಗೆ ಚಾಲಕನ ನಿಯಂತ್ರಣತಪ್ಪಿ ಕಾರು ಮರಕ್ಕೆ ಡಿಕ್ಕಿ ಹೊಡೆದಪರಿಣಾಮ ಮೂವರು ಹೆಣ್ಣುಮಕ್ಕಳುದಾರುಣವಾಗಿ ಸಾವನ್ನಪ್ಪಿರುವ ಘಟನೆಹಿರಿಯೂರು ತಾಲ್ಲೂಕಿನ ಬೀರೆನಹಳ್ಳಿಸಮೀಪ ನಡೆದಿದೆ.

ಮೃತರೆಲ್ಲರೂ ಭದ್ರಾವತಿಯಿಂದಬೆಂಗಳೂರಿಗೆ ಮದುವೆಗೆ ಹೋಗುವಾಗ ಈ ಅವಘಡ ಸಂಭವಿಸಿದ್ದು, ಕಾರುಚಾಲಕನ ಅಜಾಗರೂಕತೆಯೇ ಈಅಪಘಾತಕ್ಕೆ ಕಾರಣ ಎನ್ನಲಾಗಿದೆ.ಮೃತರನ್ನು ಸುಧಿಕ್ಷಾ (೧೭),ರೇಣುಕಾದೇವಿ (೩೯) ವಿಶಾಲಾಕಿ, (೭೦) ಎಂದು ಗುರುತಿಸಲಾಗಿದೆ. ಇನ್ನು ೧೩ ವರ್ಷದ ಪ್ರತಿಕ್ಷಾ ಗಂಭೀರವಾಗಿ ಗಾಯಗೊಂಡಿದ್ದು ಹಿರಿಯೂರು ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಚಿತ್ರದುರ್ಗದಲ್ಲಿ ಮರಕ್ಕೆ ಡಿಕ್ಕಿ ಹೊಡೆದ ಕಾರು,ಮರಕ್ಕೆ ಕಾರು ಡಿಕ್ಕಿ, ಮೂವರು ಹೆಣ್ಮಕ್ಕಳು ಸಾವುವಿಷಯ ತಿಳಿದ ತಕ್ಷಣ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಹಿರಿಯೂರು ಗ್ರಾಮಾಂತರ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳೆದ ೨೪ ಗಂಟೆಯೊಳಗೆ ಚಿತ್ರದುರ್ಗದಲ್ಲಿ ಬೇರೆ ಬೇರೆ ಸ್ಥಳಗಳಲ್ಲಿ ಒಂದೇ ರೀತಿಯ ಅಪಘಾತ ಸಂಭವಿಸಿರುವುದು ಅಚ್ಚರಿಗೆ ಕಾರಣವಾಗಿದೆ.